Advertisement
ಕಾರ್ಯಕ್ರಮಗಳು

ನ.16ಕ್ಕೆ ಸೋಮನಾಥ್ ಗೌರವ ಡಾಕ್ಟರೇಟ್ ಪದವಿ ಸ್ವೀಕಾರ

Share

ಸುಳ್ಯ : ಸುಳ್ಯದ ಕೇರ್ಪಳ ನಿವಾಸಿ ಸಿ. ಸೋಮನಾಥ್ ಅವರಿಗೆ ಕ್ರೀಡೆ(ಕರಾಟೆ) ಮತ್ತು ಯುವಜನಾಂಗ ಸೇವೆಯಲ್ಲಿ ಮಾಡಿದ ವಿಶೇಷ ಸಾಧನೆಗೆ ಇಂಟರ್ ನ್ಯಾಶನಲ್ ಗೋಬ್ಲಲ್ ಪೀಸ್ ಯುನಿವರ್ಸಿಟಿ(ಯು.ಎಸ್.ಎ) ಪಾಂಡಿಚೇರಿಯಲ್ಲಿ ನ.16ರಂದು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಿದೆ.

ಇಂಡಿಯನ್ ಅಕಾಡೆಮಿ ಆಫ್ ಮ್ಯಾರ್‌ಟೈಲ್ ಆರ್ಟ್ಸ್ ಮಂಗಳೂರು ಇದರಿಂದ ತನ್ನ ಕರಾಟೆ ಗುರುಗಳಾದ ಕೆ.ಸಿ ಶಿವಾನಂದ ಅವರಿಂದ ಕರಾಟೆ ಶಿಕ್ಷಣ ಪಡೆದು ಕರಾಟೆಯಲ್ಲಿ ಮೂರನೇ ಡ್ಯಾನ್ ಬ್ಲಾಕ್ ಬೆಲ್ಟ್ ಪದವಿ ಪಡೆದಿದ್ದಾರೆ. ಮಹಾತ್ಮ ಗಾಂಧಿ ಸದ್ಬಾವನಾ ಪ್ರಶಸ್ತಿ, ಭಾರತ ಭೂಷಣ ರಾಜ್ಯ ಪ್ರಶಸ್ತಿ, ಕರ್ನಾಟಕ ಭೂಷಣ ಪ್ರಶಸ್ತಿ, ಅಂತರಾಜ್ಯ ಕರಾಟೆ ಪ್ರಶಸ್ತಿ ಪಡೆದುಕೊಂಡಿದ್ದು ಕರಾಟೆಯ ರಾಷ್ಟ್ರಮಟ್ಟದ ತೀರ್ಪುಗಾರರಾಗಿದ್ದಾರೆ. ದ.ಕ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ 3200ಕ್ಕೂ ಅಧಿಕ ತನ್ನ ಕರಾಟೆ ಪ್ರದರ್ಶನ ನೀಡಿದ್ದಾರೆ. ಸುಳ್ಯ ಮತ್ತು ಪುತ್ತೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಹೆಚ್ಚಿನ ಎಲ್ಲಾ ವಿದ್ಯಾರ್ಥಿ ನಿಲಯದಲ್ಲಿ ಉಚಿತ ಕರಾಟೆ ತರಗತಿ ನೀಡಿದ್ದಾರೆ. ಬ್ರೇಕ್ ಡ್ಯಾನ್ಸ್ ಹಾಗು ಪಿಲ್ಮ್ ಡ್ಯಾನ್ಸ್ ಬಲ್ಲವರಾಗಿದ್ದು ಪಿಲ್ಮ್ ಡ್ಯಾನ್ಸ್ನಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಸ್ತುತ ಭಾರತೀಯ ಜೀವ ವಿಮಾ ನಿಗಮದ ಮುಖ್ಯ ವಿಮಾ ಸಲಹೆಗಾರರಾಗಿ ದುಡಿಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

6 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

6 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

6 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

16 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

17 hours ago