ಸೋಲು ಅನ್ನೋದು ಕೊನೆಯಲ್ಲ, ನಾನು ಹೋರಾಟ ಮುಂದುವರೆಸುತ್ತಾನೆ- ಹೆಚ್.ಡಿ.ಕುಮಾರಸ್ವಾಮಿ

May 13, 2023
8:57 PM

ಜನ ಅವರ ತೀರ್ಪು ನೀಡಿದ್ದಾರೆ. ಅವರ ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

 

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದಿದ್ದಾರೆ.

ಇದೇ ವೇಳೆ ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ
April 14, 2026
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror