Advertisement
ಸುದ್ದಿಗಳು

ಸೋಲು ಅನ್ನೋದು ಕೊನೆಯಲ್ಲ, ನಾನು ಹೋರಾಟ ಮುಂದುವರೆಸುತ್ತಾನೆ- ಹೆಚ್.ಡಿ.ಕುಮಾರಸ್ವಾಮಿ

Share

ಜನ ಅವರ ತೀರ್ಪು ನೀಡಿದ್ದಾರೆ. ಅವರ ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

 

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದಿದ್ದಾರೆ.

ಇದೇ ವೇಳೆ ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

11 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

10 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

11 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

11 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

24 hours ago