ಜನ ಅವರ ತೀರ್ಪು ನೀಡಿದ್ದಾರೆ. ಅವರ ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದಿದ್ದಾರೆ.
ಇದೇ ವೇಳೆ ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…