Advertisement
ನಮ್ಮೂರ ಸುದ್ದಿ

ಸೌರಭ ಸ್ನೇಹ ಸಂಗಮ ವತಿಯಿಂದ ಶಾಲಾ ಮಕ್ಕಳಿಗೆ ಛತ್ರಿ ವಿತರಣೆ

Share

ಸುಬ್ರಹ್ಮಣ್ಯ : ಸಾಮಾಜಿಕ ಬದ್ಧತೆ ವ್ಯಕ್ತಪಡಿಸುವುದು ಇಂದಿನ ಅಗತ್ಯ. ಇದನ್ನು ಎಲ್ಲರು ಬೆಳೆಸಿಕೊಳ್ಳಬೇಕು. ಮತ್ತೊಬ್ಬರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳುವುದು ಅತ್ಯವಶ್ಯಕ ಎಂದು ಸೌರಭ ಸ್ನೇಹ ಸಂಗಮದ ಸಂಚಾಲಕಿ ಸೌಮ್ಯ ಬಿ ಪೈ ಹೇಳಿದರು.

Advertisement
Advertisement
Advertisement
Advertisement

ಸುಬ್ರಹ್ಮಣ್ಯದ ಸಾಮಾಜಿಕ ಸಂಸ್ಥೆ ಸೌರಭ ಸ್ನೇಹ ಸಂಗಮ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾನಡ್ಕ ಯೇನೆಕಲ್ಲು ಇಲ್ಲಿಯ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೆ ಉಚಿತ ಕೊಡೆ ವಿತರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕೊಡೆ ವಿತರಿಸಿ ಮಾತನಾಡಿದರು. ಸರಕಾರೇತರ ಸಂಘ ಸಂಸ್ಥೆಗಳು ಅಸ್ವಿತ್ವದಲ್ಲಿದ್ದು ಸಹಾಯ ಮಾಡುವ ಮನೋಭಾವನೆ ಉಳ್ಳವರು ಇಂತಹ ಸರಕಾರಿ ಶಾಲೆಗಳಿಗೆ ನೆರವು ನೀಡುವುದಕ್ಕೆ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.

Advertisement

ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ವಿಶ್ವವಾಥ ಗೌಡ ಪೂಜಾರಿ ಮನೆ ಅವರು ಮಾತನಾಡಿ ಸೌರಭ ಸ್ನೇಹ ಸಂಗಮ ಸಂಘವು ಶಿಕ್ಷಣ ಕ್ಷೇತ್ರಕ್ಕೆ ಅದರಲ್ಲೂ ಬಡ ಶಾಲೆಗಳನ್ನು ಗುರುತಿಸಿ ಸಹಾಯ ಮಾಡುತ್ತಿರುವುದು ಶ್ಲಾಘನೀಯ. ಇತರೆ ಸಂಘ ಸಂಸ್ಥೆಗಳಿಗೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಇನ್ನಷ್ಟು ಮೂಡಿಬರಲಿ ಎಂದು ಹಾರೈಸಿದರು. ಬಳಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕೊಡೆಯನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಹಳೇ ವಿದ್ಯಾರ್ಥಿ ಮರಳೀಧರ, ಸುಬ್ರಹ್ಮಣ್ಯದ ಗೀತಾರಾಮಾಂಜನೇಯ, ಶೈಲಾಜಪ್ರವೀಣ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕಿ ಜಾನಕಿ ಮಾದನಮನೆ ಸ್ವಾಗತಿಸಿ ವಂದಿಸಿದರು, ಗೌರವ ಶಿಕ್ಷಕಿ ವಿನಿತರಾಣಿ ಸಹಕರಿಸಿದರು. ಶಾಲಾ ಎಸ್‍ಡಿಎಂಸಿ ಸದಸ್ಯರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

6 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

6 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

6 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago