ಸುಬ್ರಹ್ಮಣ್ಯ : ಸಾಮಾಜಿಕ ಬದ್ಧತೆ ವ್ಯಕ್ತಪಡಿಸುವುದು ಇಂದಿನ ಅಗತ್ಯ. ಇದನ್ನು ಎಲ್ಲರು ಬೆಳೆಸಿಕೊಳ್ಳಬೇಕು. ಮತ್ತೊಬ್ಬರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳುವುದು ಅತ್ಯವಶ್ಯಕ ಎಂದು ಸೌರಭ ಸ್ನೇಹ ಸಂಗಮದ ಸಂಚಾಲಕಿ ಸೌಮ್ಯ ಬಿ ಪೈ ಹೇಳಿದರು.
ಸುಬ್ರಹ್ಮಣ್ಯದ ಸಾಮಾಜಿಕ ಸಂಸ್ಥೆ ಸೌರಭ ಸ್ನೇಹ ಸಂಗಮ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾನಡ್ಕ ಯೇನೆಕಲ್ಲು ಇಲ್ಲಿಯ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೆ ಉಚಿತ ಕೊಡೆ ವಿತರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕೊಡೆ ವಿತರಿಸಿ ಮಾತನಾಡಿದರು. ಸರಕಾರೇತರ ಸಂಘ ಸಂಸ್ಥೆಗಳು ಅಸ್ವಿತ್ವದಲ್ಲಿದ್ದು ಸಹಾಯ ಮಾಡುವ ಮನೋಭಾವನೆ ಉಳ್ಳವರು ಇಂತಹ ಸರಕಾರಿ ಶಾಲೆಗಳಿಗೆ ನೆರವು ನೀಡುವುದಕ್ಕೆ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.
ಶಾಲಾ ಎಸ್ಡಿಎಂಸಿ ಅಧ್ಯಕ್ಷ ವಿಶ್ವವಾಥ ಗೌಡ ಪೂಜಾರಿ ಮನೆ ಅವರು ಮಾತನಾಡಿ ಸೌರಭ ಸ್ನೇಹ ಸಂಗಮ ಸಂಘವು ಶಿಕ್ಷಣ ಕ್ಷೇತ್ರಕ್ಕೆ ಅದರಲ್ಲೂ ಬಡ ಶಾಲೆಗಳನ್ನು ಗುರುತಿಸಿ ಸಹಾಯ ಮಾಡುತ್ತಿರುವುದು ಶ್ಲಾಘನೀಯ. ಇತರೆ ಸಂಘ ಸಂಸ್ಥೆಗಳಿಗೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಇನ್ನಷ್ಟು ಮೂಡಿಬರಲಿ ಎಂದು ಹಾರೈಸಿದರು. ಬಳಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕೊಡೆಯನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಹಳೇ ವಿದ್ಯಾರ್ಥಿ ಮರಳೀಧರ, ಸುಬ್ರಹ್ಮಣ್ಯದ ಗೀತಾರಾಮಾಂಜನೇಯ, ಶೈಲಾಜಪ್ರವೀಣ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಜಾನಕಿ ಮಾದನಮನೆ ಸ್ವಾಗತಿಸಿ ವಂದಿಸಿದರು, ಗೌರವ ಶಿಕ್ಷಕಿ ವಿನಿತರಾಣಿ ಸಹಕರಿಸಿದರು. ಶಾಲಾ ಎಸ್ಡಿಎಂಸಿ ಸದಸ್ಯರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.