ಸುಬ್ರಹ್ಮಣ್ಯ : ಸಾಮಾಜಿಕ ಬದ್ಧತೆ ವ್ಯಕ್ತಪಡಿಸುವುದು ಇಂದಿನ ಅಗತ್ಯ. ಇದನ್ನು ಎಲ್ಲರು ಬೆಳೆಸಿಕೊಳ್ಳಬೇಕು. ಮತ್ತೊಬ್ಬರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳುವುದು ಅತ್ಯವಶ್ಯಕ ಎಂದು ಸೌರಭ ಸ್ನೇಹ ಸಂಗಮದ ಸಂಚಾಲಕಿ ಸೌಮ್ಯ ಬಿ ಪೈ ಹೇಳಿದರು.
ಸುಬ್ರಹ್ಮಣ್ಯದ ಸಾಮಾಜಿಕ ಸಂಸ್ಥೆ ಸೌರಭ ಸ್ನೇಹ ಸಂಗಮ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾನಡ್ಕ ಯೇನೆಕಲ್ಲು ಇಲ್ಲಿಯ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೆ ಉಚಿತ ಕೊಡೆ ವಿತರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕೊಡೆ ವಿತರಿಸಿ ಮಾತನಾಡಿದರು. ಸರಕಾರೇತರ ಸಂಘ ಸಂಸ್ಥೆಗಳು ಅಸ್ವಿತ್ವದಲ್ಲಿದ್ದು ಸಹಾಯ ಮಾಡುವ ಮನೋಭಾವನೆ ಉಳ್ಳವರು ಇಂತಹ ಸರಕಾರಿ ಶಾಲೆಗಳಿಗೆ ನೆರವು ನೀಡುವುದಕ್ಕೆ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.
ಶಾಲಾ ಎಸ್ಡಿಎಂಸಿ ಅಧ್ಯಕ್ಷ ವಿಶ್ವವಾಥ ಗೌಡ ಪೂಜಾರಿ ಮನೆ ಅವರು ಮಾತನಾಡಿ ಸೌರಭ ಸ್ನೇಹ ಸಂಗಮ ಸಂಘವು ಶಿಕ್ಷಣ ಕ್ಷೇತ್ರಕ್ಕೆ ಅದರಲ್ಲೂ ಬಡ ಶಾಲೆಗಳನ್ನು ಗುರುತಿಸಿ ಸಹಾಯ ಮಾಡುತ್ತಿರುವುದು ಶ್ಲಾಘನೀಯ. ಇತರೆ ಸಂಘ ಸಂಸ್ಥೆಗಳಿಗೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಇನ್ನಷ್ಟು ಮೂಡಿಬರಲಿ ಎಂದು ಹಾರೈಸಿದರು. ಬಳಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕೊಡೆಯನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಹಳೇ ವಿದ್ಯಾರ್ಥಿ ಮರಳೀಧರ, ಸುಬ್ರಹ್ಮಣ್ಯದ ಗೀತಾರಾಮಾಂಜನೇಯ, ಶೈಲಾಜಪ್ರವೀಣ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಜಾನಕಿ ಮಾದನಮನೆ ಸ್ವಾಗತಿಸಿ ವಂದಿಸಿದರು, ಗೌರವ ಶಿಕ್ಷಕಿ ವಿನಿತರಾಣಿ ಸಹಕರಿಸಿದರು. ಶಾಲಾ ಎಸ್ಡಿಎಂಸಿ ಸದಸ್ಯರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…