ಸುಬ್ರಹ್ಮಣ್ಯ : ಸಾಮಾಜಿಕ ಬದ್ಧತೆ ವ್ಯಕ್ತಪಡಿಸುವುದು ಇಂದಿನ ಅಗತ್ಯ. ಇದನ್ನು ಎಲ್ಲರು ಬೆಳೆಸಿಕೊಳ್ಳಬೇಕು. ಮತ್ತೊಬ್ಬರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳುವುದು ಅತ್ಯವಶ್ಯಕ ಎಂದು ಸೌರಭ ಸ್ನೇಹ ಸಂಗಮದ ಸಂಚಾಲಕಿ ಸೌಮ್ಯ ಬಿ ಪೈ ಹೇಳಿದರು.
ಸುಬ್ರಹ್ಮಣ್ಯದ ಸಾಮಾಜಿಕ ಸಂಸ್ಥೆ ಸೌರಭ ಸ್ನೇಹ ಸಂಗಮ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾನಡ್ಕ ಯೇನೆಕಲ್ಲು ಇಲ್ಲಿಯ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೆ ಉಚಿತ ಕೊಡೆ ವಿತರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕೊಡೆ ವಿತರಿಸಿ ಮಾತನಾಡಿದರು. ಸರಕಾರೇತರ ಸಂಘ ಸಂಸ್ಥೆಗಳು ಅಸ್ವಿತ್ವದಲ್ಲಿದ್ದು ಸಹಾಯ ಮಾಡುವ ಮನೋಭಾವನೆ ಉಳ್ಳವರು ಇಂತಹ ಸರಕಾರಿ ಶಾಲೆಗಳಿಗೆ ನೆರವು ನೀಡುವುದಕ್ಕೆ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.
ಶಾಲಾ ಎಸ್ಡಿಎಂಸಿ ಅಧ್ಯಕ್ಷ ವಿಶ್ವವಾಥ ಗೌಡ ಪೂಜಾರಿ ಮನೆ ಅವರು ಮಾತನಾಡಿ ಸೌರಭ ಸ್ನೇಹ ಸಂಗಮ ಸಂಘವು ಶಿಕ್ಷಣ ಕ್ಷೇತ್ರಕ್ಕೆ ಅದರಲ್ಲೂ ಬಡ ಶಾಲೆಗಳನ್ನು ಗುರುತಿಸಿ ಸಹಾಯ ಮಾಡುತ್ತಿರುವುದು ಶ್ಲಾಘನೀಯ. ಇತರೆ ಸಂಘ ಸಂಸ್ಥೆಗಳಿಗೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಇನ್ನಷ್ಟು ಮೂಡಿಬರಲಿ ಎಂದು ಹಾರೈಸಿದರು. ಬಳಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕೊಡೆಯನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಹಳೇ ವಿದ್ಯಾರ್ಥಿ ಮರಳೀಧರ, ಸುಬ್ರಹ್ಮಣ್ಯದ ಗೀತಾರಾಮಾಂಜನೇಯ, ಶೈಲಾಜಪ್ರವೀಣ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಜಾನಕಿ ಮಾದನಮನೆ ಸ್ವಾಗತಿಸಿ ವಂದಿಸಿದರು, ಗೌರವ ಶಿಕ್ಷಕಿ ವಿನಿತರಾಣಿ ಸಹಕರಿಸಿದರು. ಶಾಲಾ ಎಸ್ಡಿಎಂಸಿ ಸದಸ್ಯರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…