Advertisement
ನಮ್ಮೂರ ಸುದ್ದಿ

ಸೌರಭ ಸ್ನೇಹ ಸಂಗಮ ವತಿಯಿಂದ ಶಾಲಾ ಮಕ್ಕಳಿಗೆ ಛತ್ರಿ ವಿತರಣೆ

Share

ಸುಬ್ರಹ್ಮಣ್ಯ : ಸಾಮಾಜಿಕ ಬದ್ಧತೆ ವ್ಯಕ್ತಪಡಿಸುವುದು ಇಂದಿನ ಅಗತ್ಯ. ಇದನ್ನು ಎಲ್ಲರು ಬೆಳೆಸಿಕೊಳ್ಳಬೇಕು. ಮತ್ತೊಬ್ಬರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳುವುದು ಅತ್ಯವಶ್ಯಕ ಎಂದು ಸೌರಭ ಸ್ನೇಹ ಸಂಗಮದ ಸಂಚಾಲಕಿ ಸೌಮ್ಯ ಬಿ ಪೈ ಹೇಳಿದರು.

ಸುಬ್ರಹ್ಮಣ್ಯದ ಸಾಮಾಜಿಕ ಸಂಸ್ಥೆ ಸೌರಭ ಸ್ನೇಹ ಸಂಗಮ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾನಡ್ಕ ಯೇನೆಕಲ್ಲು ಇಲ್ಲಿಯ ಎಲ್ಲ ತರಗತಿಗಳ ವಿದ್ಯಾರ್ಥಿಗಳಿಗೆ ಉಚಿತ ಕೊಡೆ ವಿತರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕೊಡೆ ವಿತರಿಸಿ ಮಾತನಾಡಿದರು. ಸರಕಾರೇತರ ಸಂಘ ಸಂಸ್ಥೆಗಳು ಅಸ್ವಿತ್ವದಲ್ಲಿದ್ದು ಸಹಾಯ ಮಾಡುವ ಮನೋಭಾವನೆ ಉಳ್ಳವರು ಇಂತಹ ಸರಕಾರಿ ಶಾಲೆಗಳಿಗೆ ನೆರವು ನೀಡುವುದಕ್ಕೆ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.

ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ವಿಶ್ವವಾಥ ಗೌಡ ಪೂಜಾರಿ ಮನೆ ಅವರು ಮಾತನಾಡಿ ಸೌರಭ ಸ್ನೇಹ ಸಂಗಮ ಸಂಘವು ಶಿಕ್ಷಣ ಕ್ಷೇತ್ರಕ್ಕೆ ಅದರಲ್ಲೂ ಬಡ ಶಾಲೆಗಳನ್ನು ಗುರುತಿಸಿ ಸಹಾಯ ಮಾಡುತ್ತಿರುವುದು ಶ್ಲಾಘನೀಯ. ಇತರೆ ಸಂಘ ಸಂಸ್ಥೆಗಳಿಗೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಇನ್ನಷ್ಟು ಮೂಡಿಬರಲಿ ಎಂದು ಹಾರೈಸಿದರು. ಬಳಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕೊಡೆಯನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಹಳೇ ವಿದ್ಯಾರ್ಥಿ ಮರಳೀಧರ, ಸುಬ್ರಹ್ಮಣ್ಯದ ಗೀತಾರಾಮಾಂಜನೇಯ, ಶೈಲಾಜಪ್ರವೀಣ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕಿ ಜಾನಕಿ ಮಾದನಮನೆ ಸ್ವಾಗತಿಸಿ ವಂದಿಸಿದರು, ಗೌರವ ಶಿಕ್ಷಕಿ ವಿನಿತರಾಣಿ ಸಹಕರಿಸಿದರು. ಶಾಲಾ ಎಸ್‍ಡಿಎಂಸಿ ಸದಸ್ಯರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

1 hour ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

4 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

8 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

8 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

17 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

18 hours ago