ಸ್ಕಂದಕೃಪಾ ವೇದ ಶಿಬಿರ ಸಮಾರೋಪ

May 14, 2019
8:30 AM

ಬೆಳ್ಳಾರೆ: ಚೂಂತಾರು ದಿ|ಕೃಷ್ಣ ಭಟ್ ವತಿಯಿಂದ ನಡೆಯುತ್ತಿದ್ದ 30 ದಿನಗಳ ಸ್ಕಂದಕೃಪಾ ವೇದ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ  ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ಹಾಗೂ ಹಿರಿಯ ಪಾಕಶಾಸ್ತ್ರಜ್ಞ ಕೃಷ್ಣಣ್ಣಯ್ಯ ಪಾದೆಯವರನ್ನು ಪ್ರತಿಷ್ಠಾನದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ರಾಮಜೋಯಿಸ ಬೆಳ್ಳಾರೆ ಸನ್ಮಾನಿತರನ್ನು ಪರಿಚಯಿಸಿದರು. ಶಿಬಿರದ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಖ್ಯಾತ ವಕೀಲ ಎಂ.ವಿ ಶಂಕರ್ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಕೋಟೆ ರಾಧಾಕೃಷ್ಣ, ಪ್ರತಿಷ್ಠಾನದ ಅಧ್ಯಕ್ಷ ಸತ್ಯಶಂಕರ ಭಟ್,ಯೋಗರತ್ನ ಗೋಪಾಲಕೃಷ್ಣ ಭಟ್ ದೇಲಂಪಾಡಿ ಉಪಸ್ಥಿತರಿದ್ದರು.

ವಿದ್ಯಾ ಸರಸ್ವತಿ ಪ್ರಸ್ತಾವನೆಗೈದರು. ವಿವೇಕ್ ಹಾಗೂ ನವೀನ್ ಪ್ರಾರ್ಥಿಸಿದರು. ಶ್ರೀಹರಿ ಸ್ವಾಗತಿಸಿ, ಸ್ಕಂದ ವಂದಿಸಿದರು. ವಸಂತಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2025′
February 13, 2025
8:38 PM
by: The Rural Mirror ಸುದ್ದಿಜಾಲ
ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror