ಬೆಳ್ಳಾರೆ: ಚೂಂತಾರು ದಿ|ಕೃಷ್ಣ ಭಟ್ ವತಿಯಿಂದ ನಡೆಯುತ್ತಿದ್ದ 30 ದಿನಗಳ ಸ್ಕಂದಕೃಪಾ ವೇದ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ಹಾಗೂ ಹಿರಿಯ ಪಾಕಶಾಸ್ತ್ರಜ್ಞ ಕೃಷ್ಣಣ್ಣಯ್ಯ ಪಾದೆಯವರನ್ನು ಪ್ರತಿಷ್ಠಾನದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ರಾಮಜೋಯಿಸ ಬೆಳ್ಳಾರೆ ಸನ್ಮಾನಿತರನ್ನು ಪರಿಚಯಿಸಿದರು. ಶಿಬಿರದ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಖ್ಯಾತ ವಕೀಲ ಎಂ.ವಿ ಶಂಕರ್ ಭಟ್ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಕೋಟೆ ರಾಧಾಕೃಷ್ಣ, ಪ್ರತಿಷ್ಠಾನದ ಅಧ್ಯಕ್ಷ ಸತ್ಯಶಂಕರ ಭಟ್,ಯೋಗರತ್ನ ಗೋಪಾಲಕೃಷ್ಣ ಭಟ್ ದೇಲಂಪಾಡಿ ಉಪಸ್ಥಿತರಿದ್ದರು.
ವಿದ್ಯಾ ಸರಸ್ವತಿ ಪ್ರಸ್ತಾವನೆಗೈದರು. ವಿವೇಕ್ ಹಾಗೂ ನವೀನ್ ಪ್ರಾರ್ಥಿಸಿದರು. ಶ್ರೀಹರಿ ಸ್ವಾಗತಿಸಿ, ಸ್ಕಂದ ವಂದಿಸಿದರು. ವಸಂತಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…