ಬೆಳ್ಳಾರೆ: ಚೂಂತಾರು ದಿ|ಕೃಷ್ಣ ಭಟ್ ವತಿಯಿಂದ ನಡೆಯುತ್ತಿದ್ದ 30 ದಿನಗಳ ಸ್ಕಂದಕೃಪಾ ವೇದ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ಹಾಗೂ ಹಿರಿಯ ಪಾಕಶಾಸ್ತ್ರಜ್ಞ ಕೃಷ್ಣಣ್ಣಯ್ಯ ಪಾದೆಯವರನ್ನು ಪ್ರತಿಷ್ಠಾನದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ರಾಮಜೋಯಿಸ ಬೆಳ್ಳಾರೆ ಸನ್ಮಾನಿತರನ್ನು ಪರಿಚಯಿಸಿದರು. ಶಿಬಿರದ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಖ್ಯಾತ ವಕೀಲ ಎಂ.ವಿ ಶಂಕರ್ ಭಟ್ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಕೋಟೆ ರಾಧಾಕೃಷ್ಣ, ಪ್ರತಿಷ್ಠಾನದ ಅಧ್ಯಕ್ಷ ಸತ್ಯಶಂಕರ ಭಟ್,ಯೋಗರತ್ನ ಗೋಪಾಲಕೃಷ್ಣ ಭಟ್ ದೇಲಂಪಾಡಿ ಉಪಸ್ಥಿತರಿದ್ದರು.
ವಿದ್ಯಾ ಸರಸ್ವತಿ ಪ್ರಸ್ತಾವನೆಗೈದರು. ವಿವೇಕ್ ಹಾಗೂ ನವೀನ್ ಪ್ರಾರ್ಥಿಸಿದರು. ಶ್ರೀಹರಿ ಸ್ವಾಗತಿಸಿ, ಸ್ಕಂದ ವಂದಿಸಿದರು. ವಸಂತಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…