ಬೆಳ್ಳಾರೆ: ಚೂಂತಾರು ದಿ|ಕೃಷ್ಣ ಭಟ್ ವತಿಯಿಂದ ನಡೆಯುತ್ತಿದ್ದ 30 ದಿನಗಳ ಸ್ಕಂದಕೃಪಾ ವೇದ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ಹಾಗೂ ಹಿರಿಯ ಪಾಕಶಾಸ್ತ್ರಜ್ಞ ಕೃಷ್ಣಣ್ಣಯ್ಯ ಪಾದೆಯವರನ್ನು ಪ್ರತಿಷ್ಠಾನದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ರಾಮಜೋಯಿಸ ಬೆಳ್ಳಾರೆ ಸನ್ಮಾನಿತರನ್ನು ಪರಿಚಯಿಸಿದರು. ಶಿಬಿರದ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಖ್ಯಾತ ವಕೀಲ ಎಂ.ವಿ ಶಂಕರ್ ಭಟ್ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಕೋಟೆ ರಾಧಾಕೃಷ್ಣ, ಪ್ರತಿಷ್ಠಾನದ ಅಧ್ಯಕ್ಷ ಸತ್ಯಶಂಕರ ಭಟ್,ಯೋಗರತ್ನ ಗೋಪಾಲಕೃಷ್ಣ ಭಟ್ ದೇಲಂಪಾಡಿ ಉಪಸ್ಥಿತರಿದ್ದರು.
ವಿದ್ಯಾ ಸರಸ್ವತಿ ಪ್ರಸ್ತಾವನೆಗೈದರು. ವಿವೇಕ್ ಹಾಗೂ ನವೀನ್ ಪ್ರಾರ್ಥಿಸಿದರು. ಶ್ರೀಹರಿ ಸ್ವಾಗತಿಸಿ, ಸ್ಕಂದ ವಂದಿಸಿದರು. ವಸಂತಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…