ಬೆಳ್ಳಾರೆ: ಚೂಂತಾರು ದಿ|ಕೃಷ್ಣ ಭಟ್ ವತಿಯಿಂದ ನಡೆಯುತ್ತಿದ್ದ 30 ದಿನಗಳ ಸ್ಕಂದಕೃಪಾ ವೇದ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ಹಾಗೂ ಹಿರಿಯ ಪಾಕಶಾಸ್ತ್ರಜ್ಞ ಕೃಷ್ಣಣ್ಣಯ್ಯ ಪಾದೆಯವರನ್ನು ಪ್ರತಿಷ್ಠಾನದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ರಾಮಜೋಯಿಸ ಬೆಳ್ಳಾರೆ ಸನ್ಮಾನಿತರನ್ನು ಪರಿಚಯಿಸಿದರು. ಶಿಬಿರದ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಖ್ಯಾತ ವಕೀಲ ಎಂ.ವಿ ಶಂಕರ್ ಭಟ್ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಕೋಟೆ ರಾಧಾಕೃಷ್ಣ, ಪ್ರತಿಷ್ಠಾನದ ಅಧ್ಯಕ್ಷ ಸತ್ಯಶಂಕರ ಭಟ್,ಯೋಗರತ್ನ ಗೋಪಾಲಕೃಷ್ಣ ಭಟ್ ದೇಲಂಪಾಡಿ ಉಪಸ್ಥಿತರಿದ್ದರು.
ವಿದ್ಯಾ ಸರಸ್ವತಿ ಪ್ರಸ್ತಾವನೆಗೈದರು. ವಿವೇಕ್ ಹಾಗೂ ನವೀನ್ ಪ್ರಾರ್ಥಿಸಿದರು. ಶ್ರೀಹರಿ ಸ್ವಾಗತಿಸಿ, ಸ್ಕಂದ ವಂದಿಸಿದರು. ವಸಂತಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…