ಬೆಳ್ಳಾರೆ: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಹಾಗೂ ವೈಷ್ಣವಿ ನಾಟ್ಯಲಯ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರ ನೃತ್ಯ ನಿರ್ದೇಶನದಲ್ಲಿ ಬೆಳೆದ ಸ್ನೇಹ ಭಟ್ ಚೂಂತಾರು ಇವರ ಶಾಸ್ತ್ರೀಯ ಮತ್ತು ಜನಪದ ನೃತ್ಯ ತರಗತಿಯನ್ನು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ದೀಪ ಬೆಳಗಿಸಿ ಉದ್ಘಾಟಿಸಿ ಸ್ನೇಹಳಿಗೆ ಸರಿಯಾದ ಗುರು ಸಿಕ್ಕಿದ್ದಾರೆ ಹಾಗೂ ಒಳ್ಳೆಯ ಗುರಿಯೂ ಇದೆ, ತಾನು ಕಲಿತ ಕಲೆಯನ್ನು ಇನ್ನೊಬ್ಬರಿಗೆ ಕಲಿಸುವ ಮನಸ್ಸು ಮಾಡಿರುವುದು ಹಾಗೂ ಇದಕ್ಕೆ ತನ್ನ ಮನೆಯವರ ಬೆಂಬಲ ಇರುವುದರಿಂದ ನೃತ್ಯ ತರಗತಿಯಲ್ಲಿ ಸಾಧನೆಯನ್ನು ಮಾಡಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸ್ನೇಹ ಭಟ್ ಚೂಂತಾರು ಇವರು ತಮ್ಮ ಗುರುಗಳಾದ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರಿಗೆ ಗುರುವಂದನೆಯನ್ನು ಸಲ್ಲಿಸಿದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ಗೌರವ ಅಧ್ಯಕ್ಷರಾದ ಚೂಂತಾರು ಲಕ್ಷ್ಮೀ ನಾರಾಯಣ ಭಟ್ ಗೌರವ ಉಪಸ್ಥಿತರಾಗಿದ್ದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ಟ್ರಸ್ಟಿಯಾದ ಮಹೇಶ್ ಭಟ್ ಚೂಂತಾರು ಸ್ವಾಗತಿಸಿದರು. ಸ್ನೇಹ ಭಟ್ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿಯಾದ ಮುರಳಿ ಮೋಹನ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…
ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…