ಸುಳ್ಯ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಅಕ್ಷರ ದಾಮ್ಲೆ ಇಂಗುಗುಂಡಿಯ ಟಾಸ್ಕ್ ಕೊಟ್ಟಿದ್ದರು. ಇದಕ್ಕೆ ಸ್ನೇಹ ಸೆಕೆಂಡರಿ ಮತ್ತು ಪ್ರೌಢಶಾಲೆಯ 105 ಮಕ್ಕಳೂ ಇಂಗು ಗುಂಡಿ ಮಾಡಿ ಅದರ ಮುಂದೆ ನಿಂತು ಫೊಟೊ ತೆಗೆಸಿ ಕಳಿಸಿದ್ದಾರೆ. ಆ ಫೊಟೊಗಳನ್ನು ಸಂಕಲಿಸಿ ತಯಾರಿಸಿದ ಫ್ಲೆಕ್ಸ್ ನ ಅನಾವರಣವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ನೆರವೇರಿಸಿದರು.
ಪ್ರತಿಯೊಬ್ಬರೂ ಸ್ವತಃ ಮಣ್ಣು ಅಗೆದು ಎರಡು ಘನ ಅಡಿಯ ಇಂಗು ಗುಂಡಿಯನ್ನು ಮನೆಯ ಪರಿಸರದಲ್ಲಿ ಮಾಡಬೇಕು. ಹೀಗೆ ಮಾಡುವುದರಿಂದ ಪರಿಸರದಲ್ಲಿ ನೀರಿನ ಸಂರಕ್ಷಣೆ ಆಗುತ್ತದೆ ಎಂಬ ಉದ್ದೇಶದಿಂದ ಈ ಗುಂಡಿಯನ್ನು ಮಾಡಲಾಗಿದೆ. ಪ್ರತಿಯೊಬ್ಬ ಮಗುವೂ ಇನ್ನೊಂದು ಗುಂಡಿ ಮಾಡಬೇಕಲ್ಲದೆ ತನ್ನ ಹುಟ್ಟುಹಬ್ಬದ ದಿನ ಒಂದು ಗಿಡ ನೆಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದು ಮಹೇಶ್ ಹೇಳಿದರು. ಪ್ಲೆಕ್ಸ್ ಅನಾವರಣದ ಸಂದರ್ಭ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…