ಸುಳ್ಯ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಅಕ್ಷರ ದಾಮ್ಲೆ ಇಂಗುಗುಂಡಿಯ ಟಾಸ್ಕ್ ಕೊಟ್ಟಿದ್ದರು. ಇದಕ್ಕೆ ಸ್ನೇಹ ಸೆಕೆಂಡರಿ ಮತ್ತು ಪ್ರೌಢಶಾಲೆಯ 105 ಮಕ್ಕಳೂ ಇಂಗು ಗುಂಡಿ ಮಾಡಿ ಅದರ ಮುಂದೆ ನಿಂತು ಫೊಟೊ ತೆಗೆಸಿ ಕಳಿಸಿದ್ದಾರೆ. ಆ ಫೊಟೊಗಳನ್ನು ಸಂಕಲಿಸಿ ತಯಾರಿಸಿದ ಫ್ಲೆಕ್ಸ್ ನ ಅನಾವರಣವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ನೆರವೇರಿಸಿದರು.
ಪ್ರತಿಯೊಬ್ಬರೂ ಸ್ವತಃ ಮಣ್ಣು ಅಗೆದು ಎರಡು ಘನ ಅಡಿಯ ಇಂಗು ಗುಂಡಿಯನ್ನು ಮನೆಯ ಪರಿಸರದಲ್ಲಿ ಮಾಡಬೇಕು. ಹೀಗೆ ಮಾಡುವುದರಿಂದ ಪರಿಸರದಲ್ಲಿ ನೀರಿನ ಸಂರಕ್ಷಣೆ ಆಗುತ್ತದೆ ಎಂಬ ಉದ್ದೇಶದಿಂದ ಈ ಗುಂಡಿಯನ್ನು ಮಾಡಲಾಗಿದೆ. ಪ್ರತಿಯೊಬ್ಬ ಮಗುವೂ ಇನ್ನೊಂದು ಗುಂಡಿ ಮಾಡಬೇಕಲ್ಲದೆ ತನ್ನ ಹುಟ್ಟುಹಬ್ಬದ ದಿನ ಒಂದು ಗಿಡ ನೆಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದು ಮಹೇಶ್ ಹೇಳಿದರು. ಪ್ಲೆಕ್ಸ್ ಅನಾವರಣದ ಸಂದರ್ಭ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…