ಸುಳ್ಯ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಅಕ್ಷರ ದಾಮ್ಲೆ ಇಂಗುಗುಂಡಿಯ ಟಾಸ್ಕ್ ಕೊಟ್ಟಿದ್ದರು. ಇದಕ್ಕೆ ಸ್ನೇಹ ಸೆಕೆಂಡರಿ ಮತ್ತು ಪ್ರೌಢಶಾಲೆಯ 105 ಮಕ್ಕಳೂ ಇಂಗು ಗುಂಡಿ ಮಾಡಿ ಅದರ ಮುಂದೆ ನಿಂತು ಫೊಟೊ ತೆಗೆಸಿ ಕಳಿಸಿದ್ದಾರೆ. ಆ ಫೊಟೊಗಳನ್ನು ಸಂಕಲಿಸಿ ತಯಾರಿಸಿದ ಫ್ಲೆಕ್ಸ್ ನ ಅನಾವರಣವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ನೆರವೇರಿಸಿದರು.
ಪ್ರತಿಯೊಬ್ಬರೂ ಸ್ವತಃ ಮಣ್ಣು ಅಗೆದು ಎರಡು ಘನ ಅಡಿಯ ಇಂಗು ಗುಂಡಿಯನ್ನು ಮನೆಯ ಪರಿಸರದಲ್ಲಿ ಮಾಡಬೇಕು. ಹೀಗೆ ಮಾಡುವುದರಿಂದ ಪರಿಸರದಲ್ಲಿ ನೀರಿನ ಸಂರಕ್ಷಣೆ ಆಗುತ್ತದೆ ಎಂಬ ಉದ್ದೇಶದಿಂದ ಈ ಗುಂಡಿಯನ್ನು ಮಾಡಲಾಗಿದೆ. ಪ್ರತಿಯೊಬ್ಬ ಮಗುವೂ ಇನ್ನೊಂದು ಗುಂಡಿ ಮಾಡಬೇಕಲ್ಲದೆ ತನ್ನ ಹುಟ್ಟುಹಬ್ಬದ ದಿನ ಒಂದು ಗಿಡ ನೆಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದು ಮಹೇಶ್ ಹೇಳಿದರು. ಪ್ಲೆಕ್ಸ್ ಅನಾವರಣದ ಸಂದರ್ಭ ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ ದಾಮ್ಲೆ ಉಪಸ್ಥಿತರಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…