ಸುದ್ದಿಗಳು

ಸ್ನೇಹ ಶಾಲೆಯಲ್ಲಿ ವಿಭಿನ್ನವಾಗಿ ಶಿಕ್ಷಕರ ದಿನಾಚರಣೆ ಆಚರಿಸಿದ ವಿದ್ಯಾರ್ಥಿಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ವಿದ್ಯೆ ಕಲಿಸಿದ ಗುರುವಿಗೆ ಮೊದಲ ವಂದನೆ ಸಲ್ಲಿಸಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಸುಳ್ಯದ ಸ್ನೇಹ ಶಾಲೆ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು.

Advertisement
Advertisement

ಶಿಕ್ಷಕರ ದಿನಾಚರಣೆಯಂದು ಶಾಲೆಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಬಿಟ್ಟು ಮಾಡುವ ಆಚರಣೆಗಿಂತ ಭಿನ್ನವಾಗಿ ಸುಳ್ಯದ ಸ್ನೇಹ ಶಾಲೆಯಲ್ಲಿ ಶಿಕ್ಷಕ ವೃಂದದವರನ್ನು ಗೌರವಿಸಲಾಯಿತು. ಶಿಕ್ಷಕಿಯರನ್ನು ವೇದಿಕೆಯಲ್ಲಿ ಕೂರಿಸಿ ವಿದ್ಯಾರ್ಥಿನಿಯರು ಆರತಿ ಎತ್ತಿ, ಪುಷ್ಪ ನೀಡಿ, ಅರಸಿನ ಕುಂಕುಮ ಹಚ್ಚಿ ವಂದನೆ ಮಾಡಿದರು.ಈ ಸಂದರ್ಭದಲ್ಲಿ ಹೆತ್ತವರೂ ಭಾಗವಹಿಸಿದ್ದು ಮಾತೆಯರೂ ಮುಂದೆ ಬಂದು ಶಿಕ್ಷಕರಿಗೆ ಆರತಿ ಎತ್ತಿದರು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಶಿಕ್ಷಕ ವೃಂದದ ಎಲ್ಲರಿಗೂ ಪುಸ್ತಕಗಳ ಉಡುಗೊರೆ ನೀಡಲಾಯಿತು.

 

ಈ ಸಂದರ್ಭದಲ್ಲಿ ಮಾತಾಡಿದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಶಿಕ್ಷಕರ ದಿನಾಚರಣೆಯನ್ನು ಮಕ್ಕಳು, ಹೆತ್ತವರು ಮತ್ತು ಆಡಳಿತ ಮಂಡಳಿಯರು ಮಾಡಬೇಕೆಂಬ ತಮ್ಮ ಚಿಂತನೆಯಂತೆ ಈ ಬಾರಿ ವಿಶಿಷ್ಟವಾಗಿ ಆಚರಿಸಿದ್ದೇವೆ ಎಂದರು.

Advertisement

ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ ಭಾರದ್ವಾಜ ಮಾತನಾಡಿ ಶಿಕ್ಷಕರ ಆಶೀರ್ವಾದವಿದ್ದರೆ ಯಾವುದೇ ಸಂಕೀರ್ಣ ಸಂದರ್ಭಗಳನ್ನೂ ನಿಭಾಯಿಸಲು ಸಾಧ್ಯವೆಂದು ಹೇಳಿದರು.

ಶಾಲಾ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆ ಮಾತನಾಡಿ ಕಲಿತು ಕಲಿಸುವ ಗುರುಗಳಿಂದಷ್ಟೇ ಸೃಜನಶೀಲ ಶಿಕ್ಷಣ ನೀಡಲು ಸಾಧ್ಯ. ಅಂತಹ ಶಿಕ್ಷಣ ನೀಡುವುದೇ ನಮ್ಮ ಗುರಿ ಎಂದರು.

ಗುರುವಂದನೆ ಕಾರ್ಯಕ್ರಮಕ್ಕೆ ಮೊದಲು ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆಯವರು ಶಿಕ್ಷಕ-ರಕ್ಷಕರ ಸಭೆಯನ್ನು ನಡೆಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

4 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

4 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

4 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

4 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…

4 hours ago