Advertisement
ಸುದ್ದಿಗಳು

ಸ್ನೇಹ ಶಾಲೆಯಲ್ಲಿ ವಿಭಿನ್ನವಾಗಿ ಶಿಕ್ಷಕರ ದಿನಾಚರಣೆ ಆಚರಿಸಿದ ವಿದ್ಯಾರ್ಥಿಗಳು

Share

ಸುಳ್ಯ: ವಿದ್ಯೆ ಕಲಿಸಿದ ಗುರುವಿಗೆ ಮೊದಲ ವಂದನೆ ಸಲ್ಲಿಸಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಸುಳ್ಯದ ಸ್ನೇಹ ಶಾಲೆ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು.

ಶಿಕ್ಷಕರ ದಿನಾಚರಣೆಯಂದು ಶಾಲೆಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಬಿಟ್ಟು ಮಾಡುವ ಆಚರಣೆಗಿಂತ ಭಿನ್ನವಾಗಿ ಸುಳ್ಯದ ಸ್ನೇಹ ಶಾಲೆಯಲ್ಲಿ ಶಿಕ್ಷಕ ವೃಂದದವರನ್ನು ಗೌರವಿಸಲಾಯಿತು. ಶಿಕ್ಷಕಿಯರನ್ನು ವೇದಿಕೆಯಲ್ಲಿ ಕೂರಿಸಿ ವಿದ್ಯಾರ್ಥಿನಿಯರು ಆರತಿ ಎತ್ತಿ, ಪುಷ್ಪ ನೀಡಿ, ಅರಸಿನ ಕುಂಕುಮ ಹಚ್ಚಿ ವಂದನೆ ಮಾಡಿದರು.ಈ ಸಂದರ್ಭದಲ್ಲಿ ಹೆತ್ತವರೂ ಭಾಗವಹಿಸಿದ್ದು ಮಾತೆಯರೂ ಮುಂದೆ ಬಂದು ಶಿಕ್ಷಕರಿಗೆ ಆರತಿ ಎತ್ತಿದರು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಶಿಕ್ಷಕ ವೃಂದದ ಎಲ್ಲರಿಗೂ ಪುಸ್ತಕಗಳ ಉಡುಗೊರೆ ನೀಡಲಾಯಿತು.

 

ಈ ಸಂದರ್ಭದಲ್ಲಿ ಮಾತಾಡಿದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಶಿಕ್ಷಕರ ದಿನಾಚರಣೆಯನ್ನು ಮಕ್ಕಳು, ಹೆತ್ತವರು ಮತ್ತು ಆಡಳಿತ ಮಂಡಳಿಯರು ಮಾಡಬೇಕೆಂಬ ತಮ್ಮ ಚಿಂತನೆಯಂತೆ ಈ ಬಾರಿ ವಿಶಿಷ್ಟವಾಗಿ ಆಚರಿಸಿದ್ದೇವೆ ಎಂದರು.

ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ ಭಾರದ್ವಾಜ ಮಾತನಾಡಿ ಶಿಕ್ಷಕರ ಆಶೀರ್ವಾದವಿದ್ದರೆ ಯಾವುದೇ ಸಂಕೀರ್ಣ ಸಂದರ್ಭಗಳನ್ನೂ ನಿಭಾಯಿಸಲು ಸಾಧ್ಯವೆಂದು ಹೇಳಿದರು.

ಶಾಲಾ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆ ಮಾತನಾಡಿ ಕಲಿತು ಕಲಿಸುವ ಗುರುಗಳಿಂದಷ್ಟೇ ಸೃಜನಶೀಲ ಶಿಕ್ಷಣ ನೀಡಲು ಸಾಧ್ಯ. ಅಂತಹ ಶಿಕ್ಷಣ ನೀಡುವುದೇ ನಮ್ಮ ಗುರಿ ಎಂದರು.

ಗುರುವಂದನೆ ಕಾರ್ಯಕ್ರಮಕ್ಕೆ ಮೊದಲು ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆಯವರು ಶಿಕ್ಷಕ-ರಕ್ಷಕರ ಸಭೆಯನ್ನು ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 hour ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

1 hour ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

10 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

18 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

1 day ago