Advertisement
ಸುದ್ದಿಗಳು

ಸ್ನೇಹ ಶಾಲೆಯಲ್ಲಿ ವಿಭಿನ್ನವಾಗಿ ಶಿಕ್ಷಕರ ದಿನಾಚರಣೆ ಆಚರಿಸಿದ ವಿದ್ಯಾರ್ಥಿಗಳು

Share

ಸುಳ್ಯ: ವಿದ್ಯೆ ಕಲಿಸಿದ ಗುರುವಿಗೆ ಮೊದಲ ವಂದನೆ ಸಲ್ಲಿಸಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಸುಳ್ಯದ ಸ್ನೇಹ ಶಾಲೆ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು.

Advertisement
Advertisement
Advertisement
Advertisement

ಶಿಕ್ಷಕರ ದಿನಾಚರಣೆಯಂದು ಶಾಲೆಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಬಿಟ್ಟು ಮಾಡುವ ಆಚರಣೆಗಿಂತ ಭಿನ್ನವಾಗಿ ಸುಳ್ಯದ ಸ್ನೇಹ ಶಾಲೆಯಲ್ಲಿ ಶಿಕ್ಷಕ ವೃಂದದವರನ್ನು ಗೌರವಿಸಲಾಯಿತು. ಶಿಕ್ಷಕಿಯರನ್ನು ವೇದಿಕೆಯಲ್ಲಿ ಕೂರಿಸಿ ವಿದ್ಯಾರ್ಥಿನಿಯರು ಆರತಿ ಎತ್ತಿ, ಪುಷ್ಪ ನೀಡಿ, ಅರಸಿನ ಕುಂಕುಮ ಹಚ್ಚಿ ವಂದನೆ ಮಾಡಿದರು.ಈ ಸಂದರ್ಭದಲ್ಲಿ ಹೆತ್ತವರೂ ಭಾಗವಹಿಸಿದ್ದು ಮಾತೆಯರೂ ಮುಂದೆ ಬಂದು ಶಿಕ್ಷಕರಿಗೆ ಆರತಿ ಎತ್ತಿದರು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಶಿಕ್ಷಕ ವೃಂದದ ಎಲ್ಲರಿಗೂ ಪುಸ್ತಕಗಳ ಉಡುಗೊರೆ ನೀಡಲಾಯಿತು.

Advertisement

 

Advertisement

ಈ ಸಂದರ್ಭದಲ್ಲಿ ಮಾತಾಡಿದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಶಿಕ್ಷಕರ ದಿನಾಚರಣೆಯನ್ನು ಮಕ್ಕಳು, ಹೆತ್ತವರು ಮತ್ತು ಆಡಳಿತ ಮಂಡಳಿಯರು ಮಾಡಬೇಕೆಂಬ ತಮ್ಮ ಚಿಂತನೆಯಂತೆ ಈ ಬಾರಿ ವಿಶಿಷ್ಟವಾಗಿ ಆಚರಿಸಿದ್ದೇವೆ ಎಂದರು.

ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ ಭಾರದ್ವಾಜ ಮಾತನಾಡಿ ಶಿಕ್ಷಕರ ಆಶೀರ್ವಾದವಿದ್ದರೆ ಯಾವುದೇ ಸಂಕೀರ್ಣ ಸಂದರ್ಭಗಳನ್ನೂ ನಿಭಾಯಿಸಲು ಸಾಧ್ಯವೆಂದು ಹೇಳಿದರು.

Advertisement

ಶಾಲಾ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆ ಮಾತನಾಡಿ ಕಲಿತು ಕಲಿಸುವ ಗುರುಗಳಿಂದಷ್ಟೇ ಸೃಜನಶೀಲ ಶಿಕ್ಷಣ ನೀಡಲು ಸಾಧ್ಯ. ಅಂತಹ ಶಿಕ್ಷಣ ನೀಡುವುದೇ ನಮ್ಮ ಗುರಿ ಎಂದರು.

Advertisement

ಗುರುವಂದನೆ ಕಾರ್ಯಕ್ರಮಕ್ಕೆ ಮೊದಲು ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆಯವರು ಶಿಕ್ಷಕ-ರಕ್ಷಕರ ಸಭೆಯನ್ನು ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

53 mins ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago