Advertisement
ಸುದ್ದಿಗಳು

ಸ್ನೇಹ ಶಾಲೆಯಲ್ಲಿ ವಿಭಿನ್ನವಾಗಿ ಶಿಕ್ಷಕರ ದಿನಾಚರಣೆ ಆಚರಿಸಿದ ವಿದ್ಯಾರ್ಥಿಗಳು

Share

ಸುಳ್ಯ: ವಿದ್ಯೆ ಕಲಿಸಿದ ಗುರುವಿಗೆ ಮೊದಲ ವಂದನೆ ಸಲ್ಲಿಸಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಸುಳ್ಯದ ಸ್ನೇಹ ಶಾಲೆ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು.

ಶಿಕ್ಷಕರ ದಿನಾಚರಣೆಯಂದು ಶಾಲೆಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಬಿಟ್ಟು ಮಾಡುವ ಆಚರಣೆಗಿಂತ ಭಿನ್ನವಾಗಿ ಸುಳ್ಯದ ಸ್ನೇಹ ಶಾಲೆಯಲ್ಲಿ ಶಿಕ್ಷಕ ವೃಂದದವರನ್ನು ಗೌರವಿಸಲಾಯಿತು. ಶಿಕ್ಷಕಿಯರನ್ನು ವೇದಿಕೆಯಲ್ಲಿ ಕೂರಿಸಿ ವಿದ್ಯಾರ್ಥಿನಿಯರು ಆರತಿ ಎತ್ತಿ, ಪುಷ್ಪ ನೀಡಿ, ಅರಸಿನ ಕುಂಕುಮ ಹಚ್ಚಿ ವಂದನೆ ಮಾಡಿದರು.ಈ ಸಂದರ್ಭದಲ್ಲಿ ಹೆತ್ತವರೂ ಭಾಗವಹಿಸಿದ್ದು ಮಾತೆಯರೂ ಮುಂದೆ ಬಂದು ಶಿಕ್ಷಕರಿಗೆ ಆರತಿ ಎತ್ತಿದರು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಶಿಕ್ಷಕ ವೃಂದದ ಎಲ್ಲರಿಗೂ ಪುಸ್ತಕಗಳ ಉಡುಗೊರೆ ನೀಡಲಾಯಿತು.

 

ಈ ಸಂದರ್ಭದಲ್ಲಿ ಮಾತಾಡಿದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಶಿಕ್ಷಕರ ದಿನಾಚರಣೆಯನ್ನು ಮಕ್ಕಳು, ಹೆತ್ತವರು ಮತ್ತು ಆಡಳಿತ ಮಂಡಳಿಯರು ಮಾಡಬೇಕೆಂಬ ತಮ್ಮ ಚಿಂತನೆಯಂತೆ ಈ ಬಾರಿ ವಿಶಿಷ್ಟವಾಗಿ ಆಚರಿಸಿದ್ದೇವೆ ಎಂದರು.

ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ ಭಾರದ್ವಾಜ ಮಾತನಾಡಿ ಶಿಕ್ಷಕರ ಆಶೀರ್ವಾದವಿದ್ದರೆ ಯಾವುದೇ ಸಂಕೀರ್ಣ ಸಂದರ್ಭಗಳನ್ನೂ ನಿಭಾಯಿಸಲು ಸಾಧ್ಯವೆಂದು ಹೇಳಿದರು.

ಶಾಲಾ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆ ಮಾತನಾಡಿ ಕಲಿತು ಕಲಿಸುವ ಗುರುಗಳಿಂದಷ್ಟೇ ಸೃಜನಶೀಲ ಶಿಕ್ಷಣ ನೀಡಲು ಸಾಧ್ಯ. ಅಂತಹ ಶಿಕ್ಷಣ ನೀಡುವುದೇ ನಮ್ಮ ಗುರಿ ಎಂದರು.

ಗುರುವಂದನೆ ಕಾರ್ಯಕ್ರಮಕ್ಕೆ ಮೊದಲು ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆಯವರು ಶಿಕ್ಷಕ-ರಕ್ಷಕರ ಸಭೆಯನ್ನು ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago