ಮಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಐ.ಪಿ.ಪಿ.ಎಸ್, ಬ್ಯಾಂಕಿಂಗ್, ಎಸ್.ಎಸ್.ಸಿ ಹಾಗೂ ರೈಲ್ವೆ ಇಲಾಖೆಗಳು ನಡೆಸುವ ಪರೀಕ್ಷೆಗಳಿಗೆ ಸಿ.ಎಲ್. ಎಜುಕೇಟ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ 18 ರಿಂದ 35 ವರ್ಷಗಳೊಳಗಿರುವ ಯಾವುದೇ ಪದವೀಧರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ವಿದ್ಯಾರ್ಹತೆಯ ಅಂಕಪಟ್ಟಿಗಳು, ಆಧಾರ್ ಕಾರ್ಡ್ಗಳ ನಕಲು ಪ್ರತಿಗಳೊಂದಿಗೆ ಫೆಬ್ರವರಿ 27 ರೊಳಗೆ ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ, ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್ಬಾಗ್, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹಾಗೂ ಸಂಬಂಧಿತ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಕೊಳ್ಳಬೇಕು. ಪೂರ್ವಭಾವಿ ತರಬೇತಿಗೆ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶಿಷ್ಯವೇತನ/ಟಿಎ/ಡಿಎ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪ್ರಶಾಂತ್ ಮೊಬೈಲ್ ಸಂಖ್ಯೆ : 9964322070 ಹಾಗೂ ದಯಾನಂದ ಮೊಬೈಲ್ ಸಂಖ್ಯೆ 9663079943 ಇವರನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಮೇಳ ಇವರ ಪ್ರಕಟಣೆ ತಿಳಿಸಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…