ಮಂಗಳೂರು :- ದಕ್ಷಿಣ ಕನ್ನಡ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸ್ವ ಉದ್ಯೋಗ ಪ್ರಾರಂಭಿಸಲು ಪಿ.ಎಂ.ಇ.ಜಿ.ಪಿ. ಯೋಜನೆ ಅಡಿಯಲ್ಲಿ ಬ್ಯಾಂಕ್ ನಲ್ಲಿ ಸಾಲ ಅಥವಾ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.
ಯೋಜನೆಯು ಡಿ.ಐ.ಸಿ/ಕೆ.ವಿ.ಐ.ಸಿ/ಕೆ.ವಿ.ಐ.ಬಿ. ಮೂರು ಇಲಾಖೆಯಲ್ಲಿ ಸೌಲಭ್ಯ ಹೊಂದಿದೆ. ಗ್ರಾಮಾಂತರ ಅಭ್ಯರ್ಥಿಗಳಿಗೆ ಸಿ.ಎಂ.ಇ.ಜಿ.ಪಿ. ಯೋಜನೆ ಅಡಿಯಲ್ಲಿ ಡಿ.ಐ.ಸಿ/ಕೆ.ವಿ.ಬಿ ಎರಡು ಇಲಾಖೆಯಲ್ಲಿ ಸೌಲಭ್ಯ ಹೊಂದಿದೆ.
ಜಿಲ್ಲೆಯಲ್ಲಿ ಕೆಲವೊಂದು ಅನಧಿಕೃತ ವ್ಯಕ್ತಿಗಳು ತಾವು ಈ ಯೋಜನೆಯ ಕನ್ಸಲ್ಟೆಂಟ್ ಎಂದು ನಂಬಿಸಿ ಹಣ ವಸೂಲು ಮಾಡಿ ಜಿಲ್ಲೆಯ ಯುವಜನರಿಗೆ ಮೋಸ ಮಾಡುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಈ ಯೋಜನೆಯಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ಯುವಕ / ಯುವತಿಯರು ಅಂಶಗಳನ್ನು ಗುರುತಿಸಿ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ, ಅರ್ಜಿ ಸಲ್ಲಿಸಿದ ನಂತರ ನಿಗದಿತ ದಿನಾಂಕದಂದು ಸಂದರ್ಶನ ನಡೆಸಲಾಗುತ್ತದೆ, ಈ ಬಗ್ಗೆ ಅಭ್ಯರ್ಥಿಗಳಿಗೆ ಮುಂಚಿತವಾಗಿ ಸಂದೇಶ (SMS ) ಕಳುಹಿಸಲಾಗುತ್ತದೆ, ಅರ್ಜಿ ಸಲ್ಲಿಕೆಯಾದ ನಂತರ ವಿವಿಧ ಹಂತಗಳ ಪ್ರಗತಿಯನ್ನು ಆನ್ಲೈನ್ನಲ್ಲಿ ನೋಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರೀಯಲ್ ಎಸ್ಟೇಟ್, ಯೆಯ್ಯಾಡಿ, ದ.ಕ., ಮಂಗಳೂರು. ದೂರವಾಣಿ ಸಂಖ್ಯೆ 0824-2214021 ಸಂಪರ್ಕಿಸಬೇಕು ಎಂದು ಜಂಟೀ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…