Advertisement
ಉದ್ಯೋಗ ಮಾಹಿತಿ

ಸ್ವಉದ್ಯೋಗ : ಬ್ಯಾಂಕ್ ಮೂಲಕ ಸಾಲ-ಸಹಾಯಧನ  ಸೌಲಭ್ಯ

Share

ಮಂಗಳೂರು :- ದಕ್ಷಿಣ ಕನ್ನಡ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸ್ವ ಉದ್ಯೋಗ ಪ್ರಾರಂಭಿಸಲು ಪಿ.ಎಂ.ಇ.ಜಿ.ಪಿ. ಯೋಜನೆ ಅಡಿಯಲ್ಲಿ  ಬ್ಯಾಂಕ್ ನಲ್ಲಿ ಸಾಲ ಅಥವಾ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.

ಯೋಜನೆಯು ಡಿ.ಐ.ಸಿ/ಕೆ.ವಿ.ಐ.ಸಿ/ಕೆ.ವಿ.ಐ.ಬಿ. ಮೂರು ಇಲಾಖೆಯಲ್ಲಿ ಸೌಲಭ್ಯ ಹೊಂದಿದೆ. ಗ್ರಾಮಾಂತರ ಅಭ್ಯರ್ಥಿಗಳಿಗೆ ಸಿ.ಎಂ.ಇ.ಜಿ.ಪಿ. ಯೋಜನೆ ಅಡಿಯಲ್ಲಿ ಡಿ.ಐ.ಸಿ/ಕೆ.ವಿ.ಬಿ ಎರಡು ಇಲಾಖೆಯಲ್ಲಿ ಸೌಲಭ್ಯ ಹೊಂದಿದೆ.

ಜಿಲ್ಲೆಯಲ್ಲಿ ಕೆಲವೊಂದು ಅನಧಿಕೃತ ವ್ಯಕ್ತಿಗಳು ತಾವು ಈ ಯೋಜನೆಯ ಕನ್‍ಸಲ್ಟೆಂಟ್ ಎಂದು ನಂಬಿಸಿ ಹಣ ವಸೂಲು ಮಾಡಿ ಜಿಲ್ಲೆಯ ಯುವಜನರಿಗೆ ಮೋಸ ಮಾಡುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಈ ಯೋಜನೆಯಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ಯುವಕ / ಯುವತಿಯರು ಅಂಶಗಳನ್ನು ಗುರುತಿಸಿ ಅರ್ಜಿ ಸಲ್ಲಿಸಬೇಕು.

ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ, ಅರ್ಜಿ ಸಲ್ಲಿಸಿದ ನಂತರ ನಿಗದಿತ ದಿನಾಂಕದಂದು ಸಂದರ್ಶನ ನಡೆಸಲಾಗುತ್ತದೆ, ಈ ಬಗ್ಗೆ ಅಭ್ಯರ್ಥಿಗಳಿಗೆ ಮುಂಚಿತವಾಗಿ ಸಂದೇಶ (SMS ) ಕಳುಹಿಸಲಾಗುತ್ತದೆ, ಅರ್ಜಿ ಸಲ್ಲಿಕೆಯಾದ ನಂತರ ವಿವಿಧ ಹಂತಗಳ ಪ್ರಗತಿಯನ್ನು ಆನ್‍ಲೈನ್‍ನಲ್ಲಿ ನೋಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರೀಯಲ್ ಎಸ್ಟೇಟ್, ಯೆಯ್ಯಾಡಿ, ದ.ಕ., ಮಂಗಳೂರು. ದೂರವಾಣಿ ಸಂಖ್ಯೆ 0824-2214021 ಸಂಪರ್ಕಿಸಬೇಕು ಎಂದು ಜಂಟೀ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

3 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

3 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

3 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

3 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

3 hours ago

ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ

ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…

4 hours ago