ಸ್ವಚ್ಛತಾ ಕಾರ್ಯ ಒಂದು ದಿನದ್ದಲ್ಲ, ಅದು ನಿರಂತರ

April 28, 2019
4:28 PM

ಸುಬ್ರಹ್ಮಣ್ಯ: ಸ್ವಚ್ಛತಾ ಕಾರ್ಯ ಎನ್ನುವುದು ಒಬ್ಬರದ್ದು, ಒಂದು ಸಂಘಟನೆಯದ್ದು ಮಾತ್ರವೇ ಅಲ್ಲ. ಅದು ಎಲ್ಲರ ಜವಾಬ್ದಾರಿ ಹಾಗೂ ಅದು ನಿರಂತರ.. ಹೀಗೆಂದು ಎಚ್ಚರಿಸಿದ್ದು ಎಂದು ರಾಜ್ಯ ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಅವರು ಕುಕ್ಕೆಸುಬ್ರಹ್ಮಣ್ಯದಲ್ಲಿ ಎರಡು ದಿನಗಳ ಕಾಲ ಯುವ ಬ್ರಿಗೇಡ್ ವತಿಯಿಂದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆದ #ಕುಮಾರ_ಸಂಸ್ಕಾರ ನದಿ ಸ್ವಚ್ಛತಾ ಆಂದೋಲನದ ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವಸಮಾಜವು ಯಾವತ್ತೂ ಸಮಾಜಮುಖಿಯಾಗಿ ಯೋಚನೆ ಮಾಡಬೇಕು. ಇದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ.ಯಾವುದೇ ಗ್ರಾಮಗಳ ಅಭಿವೃದ್ಧಿಗೆ ಜಲಮೂಲ ಅತ್ಯಗತ್ಯ.ಜಲಮೂಲದ ನದಿಗಳ ಸಂರಕ್ಷಣೆಗೆ ಯುವ ಜನಾಂಗ ಕಠಿಬದ್ದವಾಗಬೇಕು ಎಂದರು.
ಸ್ವಚ್ಛತಾ ಕಾರ್ಯ ಎನ್ನುವುದು ಒಂದು ದಿನದ್ದು ಆಗಬಾರದು, ಅದು ನಿರಂತರವಾಗಿರಬೇಕು. ಹಾಗಾದಾಗ ನದಿಯನ್ನು ಉಳಿಸಬಹುದು.ಸ್ಥಳಿಯರು ನದಿ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಸುಶೀಲಾ ಹೊಸಮನೆ, ಜೇಸಿಸ್ ವಲಯಾಧಿಕಾರಿ ರವಿಕಕ್ಕೆಪದವು, ಗ್ರಾ.ಪಂ.ಸದಸ್ಯ ಪ್ರಶಾಂತ್ ಭಟ್ ಮಾಣಿಲ, ಪಿಡಿಓ ಮುತ್ತಪ್ಪ, ನಮ್ಮ ಸುಬ್ರಹ್ಮಣ್ಯ ಯುವ ಬಳಗದ ರಮೇಶ್ ಭಟ್, ಸೂರ್ಯ ಭಟ್, ಅನಂತ ವೇದಿಕೆಯಲ್ಲಿದ್ದರು.ಯುವ ಬ್ರಿಗೇಡ್ ಸದಸ್ಯರು, ಸಹೋದರಿ ನಿವೇದಿತಾ ಪ್ರತಿಷ್ಠಾನದ ಸದಸ್ಯರು, ನಮ್ಮ ಸುಬ್ರಹ್ಮಣ್ಯ ಯುವ ಬಳಗದ ಸದಸ್ಯರು ಮತ್ತು ಇತರ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror