ಸುಬ್ರಹ್ಮಣ್ಯ: ಸ್ವಚ್ಛತಾ ಕಾರ್ಯ ಎನ್ನುವುದು ಒಬ್ಬರದ್ದು, ಒಂದು ಸಂಘಟನೆಯದ್ದು ಮಾತ್ರವೇ ಅಲ್ಲ. ಅದು ಎಲ್ಲರ ಜವಾಬ್ದಾರಿ ಹಾಗೂ ಅದು ನಿರಂತರ.. ಹೀಗೆಂದು ಎಚ್ಚರಿಸಿದ್ದು ಎಂದು ರಾಜ್ಯ ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಅವರು ಕುಕ್ಕೆಸುಬ್ರಹ್ಮಣ್ಯದಲ್ಲಿ ಎರಡು ದಿನಗಳ ಕಾಲ ಯುವ ಬ್ರಿಗೇಡ್ ವತಿಯಿಂದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆದ #ಕುಮಾರ_ಸಂಸ್ಕಾರ ನದಿ ಸ್ವಚ್ಛತಾ ಆಂದೋಲನದ ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವಸಮಾಜವು ಯಾವತ್ತೂ ಸಮಾಜಮುಖಿಯಾಗಿ ಯೋಚನೆ ಮಾಡಬೇಕು. ಇದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ.ಯಾವುದೇ ಗ್ರಾಮಗಳ ಅಭಿವೃದ್ಧಿಗೆ ಜಲಮೂಲ ಅತ್ಯಗತ್ಯ.ಜಲಮೂಲದ ನದಿಗಳ ಸಂರಕ್ಷಣೆಗೆ ಯುವ ಜನಾಂಗ ಕಠಿಬದ್ದವಾಗಬೇಕು ಎಂದರು.
ಸ್ವಚ್ಛತಾ ಕಾರ್ಯ ಎನ್ನುವುದು ಒಂದು ದಿನದ್ದು ಆಗಬಾರದು, ಅದು ನಿರಂತರವಾಗಿರಬೇಕು. ಹಾಗಾದಾಗ ನದಿಯನ್ನು ಉಳಿಸಬಹುದು.ಸ್ಥಳಿಯರು ನದಿ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಸುಶೀಲಾ ಹೊಸಮನೆ, ಜೇಸಿಸ್ ವಲಯಾಧಿಕಾರಿ ರವಿಕಕ್ಕೆಪದವು, ಗ್ರಾ.ಪಂ.ಸದಸ್ಯ ಪ್ರಶಾಂತ್ ಭಟ್ ಮಾಣಿಲ, ಪಿಡಿಓ ಮುತ್ತಪ್ಪ, ನಮ್ಮ ಸುಬ್ರಹ್ಮಣ್ಯ ಯುವ ಬಳಗದ ರಮೇಶ್ ಭಟ್, ಸೂರ್ಯ ಭಟ್, ಅನಂತ ವೇದಿಕೆಯಲ್ಲಿದ್ದರು.ಯುವ ಬ್ರಿಗೇಡ್ ಸದಸ್ಯರು, ಸಹೋದರಿ ನಿವೇದಿತಾ ಪ್ರತಿಷ್ಠಾನದ ಸದಸ್ಯರು, ನಮ್ಮ ಸುಬ್ರಹ್ಮಣ್ಯ ಯುವ ಬಳಗದ ಸದಸ್ಯರು ಮತ್ತು ಇತರ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…