ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥ ಆಗಮನದ ಸಂದರ್ಭ ಭಕ್ತಾದಿಗಳಿಗೆ ಸ್ವಚ್ಛತೆಯ ಬಗ್ಗೆಯೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅರಿವು ಮೂಡಿಸಿದೆ.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ತ್ಯಾಜ್ಯಗಳ ವಿಂಗಡಣೆ ಹಾಗೂ ವಿಲೇವಾರಿ ಬಗ್ಗೆ ಮಾಹಿತಿ ನೀಡುವ ವಾಹನವು ಬ್ರಹ್ಮರಥ ಆಗಮನದ ಸಂದರ್ಭ ಎಲ್ಲರ ಗಮನಸೆಳೆಯಿತು. ಹಸಿ ಕಸಗಳ ಹಾಗು ಒಣಕಸಗಳ ವಿಂಗಡನೆ ಹಾಗೂ ಅದರ ಮರುಬಳಕೆ ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿತ್ತು. ಗೊಬ್ಬರ ತಯಾರಿಯ ಬಗ್ಗೆಯೂ ಸಂಕ್ಷಿಪ್ತ ಮಾಹಿತಿ ಅಲ್ಲಿತ್ತು.
ಇಂದು ಎಲ್ಲೆಡೆ ತ್ಯಾಜ್ಯಗಳ ವಿಲೇವಾರಿಯೇ ಬಹುದೊಡ್ಡ ಸಮಸ್ಯೆಯಾಗಿದೆ. ಸುಬ್ರಹ್ಮಣ್ಯದಲ್ಲಿ ಭಕ್ತಾದಿಗಳು ಸಾಕಷ್ಟು ಸಂಖ್ಯೆಯಲ್ಲಿ ಬರುವುದರಿಂದ ತ್ಯಾಜ್ಯಗಳನ್ನೂ ಎಲ್ಲೆಡೆ ಎಸೆಯುವ ಪ್ರವೃತ್ತಿ ಇದೆ. ಹೀಗಾಗಿ ಆಡಳಿತಕ್ಕೂ ಯಾವಾಗಲೂ ಸಮಸ್ಯೆಯಾಗುತ್ತಿದೆ. ಇದೀಗ ಜಾಗೃತಿ ಕಾರ್ಯಕ್ರಮದ ಮೂಲಕ ಜನರನ್ನು, ಭಕ್ತಾದಿಗಳನ್ನು ಎಚ್ಚರಿಸಲಾಗಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…