ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥ ಆಗಮನದ ಸಂದರ್ಭ ಭಕ್ತಾದಿಗಳಿಗೆ ಸ್ವಚ್ಛತೆಯ ಬಗ್ಗೆಯೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅರಿವು ಮೂಡಿಸಿದೆ.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ತ್ಯಾಜ್ಯಗಳ ವಿಂಗಡಣೆ ಹಾಗೂ ವಿಲೇವಾರಿ ಬಗ್ಗೆ ಮಾಹಿತಿ ನೀಡುವ ವಾಹನವು ಬ್ರಹ್ಮರಥ ಆಗಮನದ ಸಂದರ್ಭ ಎಲ್ಲರ ಗಮನಸೆಳೆಯಿತು. ಹಸಿ ಕಸಗಳ ಹಾಗು ಒಣಕಸಗಳ ವಿಂಗಡನೆ ಹಾಗೂ ಅದರ ಮರುಬಳಕೆ ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿತ್ತು. ಗೊಬ್ಬರ ತಯಾರಿಯ ಬಗ್ಗೆಯೂ ಸಂಕ್ಷಿಪ್ತ ಮಾಹಿತಿ ಅಲ್ಲಿತ್ತು.
ಇಂದು ಎಲ್ಲೆಡೆ ತ್ಯಾಜ್ಯಗಳ ವಿಲೇವಾರಿಯೇ ಬಹುದೊಡ್ಡ ಸಮಸ್ಯೆಯಾಗಿದೆ. ಸುಬ್ರಹ್ಮಣ್ಯದಲ್ಲಿ ಭಕ್ತಾದಿಗಳು ಸಾಕಷ್ಟು ಸಂಖ್ಯೆಯಲ್ಲಿ ಬರುವುದರಿಂದ ತ್ಯಾಜ್ಯಗಳನ್ನೂ ಎಲ್ಲೆಡೆ ಎಸೆಯುವ ಪ್ರವೃತ್ತಿ ಇದೆ. ಹೀಗಾಗಿ ಆಡಳಿತಕ್ಕೂ ಯಾವಾಗಲೂ ಸಮಸ್ಯೆಯಾಗುತ್ತಿದೆ. ಇದೀಗ ಜಾಗೃತಿ ಕಾರ್ಯಕ್ರಮದ ಮೂಲಕ ಜನರನ್ನು, ಭಕ್ತಾದಿಗಳನ್ನು ಎಚ್ಚರಿಸಲಾಗಿದೆ.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…