ಸುಳ್ಯ: ಪೌರ ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಪೌರ ಕಾರ್ಮಿಕರ ರಜೆಯ ಹಿನ್ನಲೆಯಲ್ಲಿ ದಿನದ ಸ್ವಚ್ಛತೆಗೆ ತೊಡಕಾಗದಂತೆ ಸುಳ್ಯದ ಸ್ವಚ್ಛ ನಗರ ತಂಡ ಸ್ವಚ್ಛತಾ ಕಾರ್ಯವನ್ನು ನೆರವೇರಿಸಿದರು. ಸುಳ್ಯ ಗಾಂಧೀನಗರದಿಂದ ಹಳೆಗೇಟಿನವರೆಗೆ ಸ್ವಚ್ಛ ನಗರ ಸುಳ್ಯ ತಂಡ ಬೆಳಿಗ್ಗೆ 6.30 ರಿಂದ 9 ಗಂಟೆಯವರೆಗೆ ಸ್ವಚ್ಛತಾ ಕಾರ್ಯ ನಡೆಸಿ ಪೌರ ಸೇವೆ ಮಾಡಿದರು. ಒಂದು ದಿನದ ಕಸವೂ ನಾಳೆಗೆ ಕಾರ್ಮಿಕರಿಗೆ ಹೊರೆಯಾಗಬಾರದು ಎಂಬ ಕಳಕಳಿಯಿಂದ ಈ ಕಾರ್ಯ ನಡೆಸಿದರು. ನಗರ ಪಂಚಾಯತ್ ನ ಅಧಿಕಾರಿಗಳೇ ವಾಹನ ಚಾಲಕರಾಗಿಯೂ ಸ್ವಚ್ಛತೆಯಲ್ಲೂ ತಮ್ಮನ್ನು ತೊಡಗಿಸಿಕೊಂಡರು.
ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ, ಆರೋಗ್ಯ ಅಧಿಕಾರಿ ರವಿ ಕೃಷ್ಣ, ಸ್ವಚ್ಛ ನಗರ ಸುಳ್ಯ ತಂಡದ ವಿನೋದ್ ಲಸ್ರಾದೋ ,ಲೋಕೇಶ್ ಗುಡ್ಡೆಮನೆ, ವಿಖ್ಯಾತ್ ಬಾರ್ಪಣೆ ಲೋಕೇಶ್ ಕೆರೆಮೂಲೆ, ಶರತ್, ನವೀನ ಕರುಂಬಯ್ಯ, ಎ.ಎಂ.ಭಟ್ , ಕೆ.ವಿ ಮನೋಹರ ,ಇಲ್ಯಾಸ್ ಅಜ್ಜಾವರ, ಸಿದ್ದಿಕ್ ಗೂನಡ್ಕ,ಶರೀಪ್ ಜಟ್ಟಿಪಳ್ಳ, ರಾಮಚಂದ್ರ ಪೆಲ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…