ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾರೆ, ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜೆ.ಸಿ.ಐ. ಬೆಳ್ಳಾರೆ ಹಾಗೂ ಡಾ| ಕೆ. ಶಿವರಾಮ ಕಾರಂತ ಪ್ರ.ದರ್ಜೆ ಕಾಲೇಜು ಬೆಳ್ಳಾರೆಯ ಸಮಾಜ ಕಾರ್ಯ ವಿಭಾಗಗಳ ಸಹಭಾಗಿತ್ವದಲ್ಲಿ ಸ್ವಚ್ಛ ಬೆಳ್ಳಾರೆ, ಡೆಂಘೆ , ಕ್ಷಯರೋಗಗಳ ಜಾಗೃತಿ ಕಾರ್ಯಕ್ರಮವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಪೆರ್ಲಂಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಅಮಿತ್ ಅವರು ಮಾತನಾಡಿ, ಡೆಂಘೆ ಕಾಯಿಲೆಗೆ ನಿರ್ದಿಷ್ಟ ಔಷಧಿವಿರುವುದಿಲ್ಲ. ಜಾಲತಾಣಗಳಲ್ಲಿ ನಮೂದಿಸಿರುವ ಔಷಧಗಳ ಬಗ್ಗೆ ಯಾವುದೇ ಭರವಸೆಯಿಲ್ಲ. ಜ್ವರ ಇತ್ಯಾದಿ ಕಾಯಿಲೆಗಳಿಗೆ ವೈದ್ಯರ ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಎಂದು ಕರೆ ಇತ್ತರು.
ಆರೋಗ್ಯ ಕೇಂದ್ರದ ವೈದ್ಯೆ ಡಾ| ಅಶ್ವಥಿ, ಮಾತನಾಡಿ ಕಾಯಿಲೆ ಹಬ್ಬದಂತೆ, ಪರಿಸರವನ್ನು ಸ್ವಚ್ಛವಾಗಿಸುವ ಬಗ್ಗೆ ಜಾಗೃತಿ ಮೂಡಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರೋಟರಿ ಕ್ಲಬ್ ಟೌನ್ನ ಅಧ್ಯಕ್ಷ ಬಿ. ನರಸಿಂಹ ಜೋಶಿ ಮಾತನಾಡಿ, ಡೆಂಗ್ಯೂ ಇನ್ನಿತರ ಮಾರಕ ಕಾಯಿಲೆಗಳ ಬಗ್ಗೆ ಪ್ರತಿಯೊಬ್ಬರೂ ಸೂಕ್ತ ಮಾಹಿತಿ ಪಡಕೊಂಡು ಆರೋಗ್ಯವಂತ ಸಮಾಜವನ್ನು ಕಟ್ಟಲು ಸಹಕರಿಸಬೇಕೆಂದು ಕೋರಿದರು.
ಬೆಳ್ಳಾರೆ ಗ್ರಾ.ಪಂ. ಸದಸ್ಯ ಮಹಮ್ಮದ್ ಆರೀಫ್ ಅವರು ‘ಸ್ವಚ್ಛ ಬೆಳ್ಳಾರೆ’ಯ ಕನಸನ್ನು ನನಸಾಗಿಸಲು ಪ್ರತಿಯೊಬ್ಬರೂ ಸಹಕರಿಸುವಂತೆ ಮನವಿ ಮಾಡಿದರು.
ಜೆ.ಸಿ.ಐ.ನ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿ ಕ್ಷಯರೋಗ ನಿರ್ಮೂಲನೆ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್ನ ಕಾರ್ಯದರ್ಶಿ ಗೋಪಾಲಕೃಷ್ಣ ಪಿ. ಯಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ನ ಶ್ಯಾಮಸುಂದರ ರೈ, ಏ.ಕೆ. ಮಣಿಯಾಣಿ, ಐತ್ತಪ್ಪ ಗೌಡ ಕಾವಿನಮೂಲೆ, ಸೀತಾರಾಮ ನೆಟ್ಟಾರು, ಜೆ.ಸಿ.ಐ.ನ ಪ್ರಸಾದ್ ಸೇವಿತ ಉಪಸ್ಥಿತರಿದ್ದರು.
ಕೇಂದ್ರದ ಆಶಾ ಕಾರ್ಯಕರ್ತೆಯರು, ಕಾಲೇಜಿನ ಸಮಾಜ ಸೇವಾ ಕಾರ್ಯದ ವಿದ್ಯಾರ್ಥಿಗಳು ಹಾಗೂ ಸಂಘಟನೆಗಳ ಸದಸ್ಯರು, ಸ್ವಚ್ಛ ಬೆಳ್ಳಾರೆಯ ಅಂಗವಾಗಿ ಪೇಟೆಯ ಇಕ್ಕೆಲೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಇನ್ನಿತ್ತರ ಕಸಗಳನ್ನು ವಿಲೇವಾರಿ ಮಾಡಿ ಸ್ವಚ್ಛತೆಗೈದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…