ಸುದ್ದಿಗಳು

ಸ್ವಚ್ಛ ಬೆಳ್ಳಾರೆ ಹಾಗೂ ಡೆಂಘೆ , ಕ್ಷಯರೋಗ ಜಾಗೃತಿ ಕಾರ್ಯಕ್ರಮ:

Share

ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾರೆ, ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜೆ.ಸಿ.ಐ. ಬೆಳ್ಳಾರೆ ಹಾಗೂ ಡಾ| ಕೆ. ಶಿವರಾಮ ಕಾರಂತ ಪ್ರ.ದರ್ಜೆ ಕಾಲೇಜು ಬೆಳ್ಳಾರೆಯ ಸಮಾಜ ಕಾರ್ಯ ವಿಭಾಗಗಳ ಸಹಭಾಗಿತ್ವದಲ್ಲಿ ಸ್ವಚ್ಛ ಬೆಳ್ಳಾರೆ, ಡೆಂಘೆ , ಕ್ಷಯರೋಗಗಳ ಜಾಗೃತಿ ಕಾರ್ಯಕ್ರಮವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಪೆರ್ಲಂಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಅಮಿತ್‍ ಅವರು ಮಾತನಾಡಿ, ಡೆಂಘೆ ಕಾಯಿಲೆಗೆ ನಿರ್ದಿಷ್ಟ ಔಷಧಿವಿರುವುದಿಲ್ಲ. ಜಾಲತಾಣಗಳಲ್ಲಿ ನಮೂದಿಸಿರುವ ಔಷಧಗಳ ಬಗ್ಗೆ ಯಾವುದೇ ಭರವಸೆಯಿಲ್ಲ. ಜ್ವರ ಇತ್ಯಾದಿ ಕಾಯಿಲೆಗಳಿಗೆ ವೈದ್ಯರ ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಎಂದು ಕರೆ ಇತ್ತರು.

ಆರೋಗ್ಯ ಕೇಂದ್ರದ ವೈದ್ಯೆ ಡಾ| ಅಶ್ವಥಿ, ಮಾತನಾಡಿ ಕಾಯಿಲೆ ಹಬ್ಬದಂತೆ, ಪರಿಸರವನ್ನು ಸ್ವಚ್ಛವಾಗಿಸುವ ಬಗ್ಗೆ ಜಾಗೃತಿ ಮೂಡಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರೋಟರಿ ಕ್ಲಬ್ ಟೌನ್‍ನ ಅಧ್ಯಕ್ಷ ಬಿ. ನರಸಿಂಹ ಜೋಶಿ ಮಾತನಾಡಿ, ಡೆಂಗ್ಯೂ ಇನ್ನಿತರ ಮಾರಕ ಕಾಯಿಲೆಗಳ ಬಗ್ಗೆ ಪ್ರತಿಯೊಬ್ಬರೂ ಸೂಕ್ತ ಮಾಹಿತಿ ಪಡಕೊಂಡು ಆರೋಗ್ಯವಂತ ಸಮಾಜವನ್ನು ಕಟ್ಟಲು ಸಹಕರಿಸಬೇಕೆಂದು ಕೋರಿದರು.

ಬೆಳ್ಳಾರೆ ಗ್ರಾ.ಪಂ. ಸದಸ್ಯ ಮಹಮ್ಮದ್ ಆರೀಫ್‍ ಅವರು ‘ಸ್ವಚ್ಛ ಬೆಳ್ಳಾರೆ’ಯ ಕನಸನ್ನು ನನಸಾಗಿಸಲು ಪ್ರತಿಯೊಬ್ಬರೂ ಸಹಕರಿಸುವಂತೆ ಮನವಿ ಮಾಡಿದರು.

ಜೆ.ಸಿ.ಐ.ನ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿ ಕ್ಷಯರೋಗ ನಿರ್ಮೂಲನೆ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್‍ನ ಕಾರ್ಯದರ್ಶಿ ಗೋಪಾಲಕೃಷ್ಣ ಪಿ. ಯಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‍ನ ಶ್ಯಾಮಸುಂದರ ರೈ, ಏ.ಕೆ. ಮಣಿಯಾಣಿ, ಐತ್ತಪ್ಪ ಗೌಡ ಕಾವಿನಮೂಲೆ, ಸೀತಾರಾಮ ನೆಟ್ಟಾರು, ಜೆ.ಸಿ.ಐ.ನ ಪ್ರಸಾದ್ ಸೇವಿತ ಉಪಸ್ಥಿತರಿದ್ದರು.

ಕೇಂದ್ರದ ಆಶಾ ಕಾರ್ಯಕರ್ತೆಯರು, ಕಾಲೇಜಿನ ಸಮಾಜ ಸೇವಾ ಕಾರ್ಯದ ವಿದ್ಯಾರ್ಥಿಗಳು ಹಾಗೂ ಸಂಘಟನೆಗಳ ಸದಸ್ಯರು, ಸ್ವಚ್ಛ ಬೆಳ್ಳಾರೆಯ ಅಂಗವಾಗಿ ಪೇಟೆಯ ಇಕ್ಕೆಲೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಇನ್ನಿತ್ತರ ಕಸಗಳನ್ನು ವಿಲೇವಾರಿ ಮಾಡಿ ಸ್ವಚ್ಛತೆಗೈದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

2 hours ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

2 hours ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

2 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

2 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

2 hours ago

ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ…

2 hours ago