Advertisement
ಸುದ್ದಿಗಳು

ಸ್ವಚ್ಛ ಬೆಳ್ಳಾರೆ ಹಾಗೂ ಡೆಂಘೆ , ಕ್ಷಯರೋಗ ಜಾಗೃತಿ ಕಾರ್ಯಕ್ರಮ:

Share

ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾರೆ, ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜೆ.ಸಿ.ಐ. ಬೆಳ್ಳಾರೆ ಹಾಗೂ ಡಾ| ಕೆ. ಶಿವರಾಮ ಕಾರಂತ ಪ್ರ.ದರ್ಜೆ ಕಾಲೇಜು ಬೆಳ್ಳಾರೆಯ ಸಮಾಜ ಕಾರ್ಯ ವಿಭಾಗಗಳ ಸಹಭಾಗಿತ್ವದಲ್ಲಿ ಸ್ವಚ್ಛ ಬೆಳ್ಳಾರೆ, ಡೆಂಘೆ , ಕ್ಷಯರೋಗಗಳ ಜಾಗೃತಿ ಕಾರ್ಯಕ್ರಮವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಪೆರ್ಲಂಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಅಮಿತ್‍ ಅವರು ಮಾತನಾಡಿ, ಡೆಂಘೆ ಕಾಯಿಲೆಗೆ ನಿರ್ದಿಷ್ಟ ಔಷಧಿವಿರುವುದಿಲ್ಲ. ಜಾಲತಾಣಗಳಲ್ಲಿ ನಮೂದಿಸಿರುವ ಔಷಧಗಳ ಬಗ್ಗೆ ಯಾವುದೇ ಭರವಸೆಯಿಲ್ಲ. ಜ್ವರ ಇತ್ಯಾದಿ ಕಾಯಿಲೆಗಳಿಗೆ ವೈದ್ಯರ ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಎಂದು ಕರೆ ಇತ್ತರು.

ಆರೋಗ್ಯ ಕೇಂದ್ರದ ವೈದ್ಯೆ ಡಾ| ಅಶ್ವಥಿ, ಮಾತನಾಡಿ ಕಾಯಿಲೆ ಹಬ್ಬದಂತೆ, ಪರಿಸರವನ್ನು ಸ್ವಚ್ಛವಾಗಿಸುವ ಬಗ್ಗೆ ಜಾಗೃತಿ ಮೂಡಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರೋಟರಿ ಕ್ಲಬ್ ಟೌನ್‍ನ ಅಧ್ಯಕ್ಷ ಬಿ. ನರಸಿಂಹ ಜೋಶಿ ಮಾತನಾಡಿ, ಡೆಂಗ್ಯೂ ಇನ್ನಿತರ ಮಾರಕ ಕಾಯಿಲೆಗಳ ಬಗ್ಗೆ ಪ್ರತಿಯೊಬ್ಬರೂ ಸೂಕ್ತ ಮಾಹಿತಿ ಪಡಕೊಂಡು ಆರೋಗ್ಯವಂತ ಸಮಾಜವನ್ನು ಕಟ್ಟಲು ಸಹಕರಿಸಬೇಕೆಂದು ಕೋರಿದರು.

ಬೆಳ್ಳಾರೆ ಗ್ರಾ.ಪಂ. ಸದಸ್ಯ ಮಹಮ್ಮದ್ ಆರೀಫ್‍ ಅವರು ‘ಸ್ವಚ್ಛ ಬೆಳ್ಳಾರೆ’ಯ ಕನಸನ್ನು ನನಸಾಗಿಸಲು ಪ್ರತಿಯೊಬ್ಬರೂ ಸಹಕರಿಸುವಂತೆ ಮನವಿ ಮಾಡಿದರು.

ಜೆ.ಸಿ.ಐ.ನ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿ ಕ್ಷಯರೋಗ ನಿರ್ಮೂಲನೆ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್‍ನ ಕಾರ್ಯದರ್ಶಿ ಗೋಪಾಲಕೃಷ್ಣ ಪಿ. ಯಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‍ನ ಶ್ಯಾಮಸುಂದರ ರೈ, ಏ.ಕೆ. ಮಣಿಯಾಣಿ, ಐತ್ತಪ್ಪ ಗೌಡ ಕಾವಿನಮೂಲೆ, ಸೀತಾರಾಮ ನೆಟ್ಟಾರು, ಜೆ.ಸಿ.ಐ.ನ ಪ್ರಸಾದ್ ಸೇವಿತ ಉಪಸ್ಥಿತರಿದ್ದರು.

ಕೇಂದ್ರದ ಆಶಾ ಕಾರ್ಯಕರ್ತೆಯರು, ಕಾಲೇಜಿನ ಸಮಾಜ ಸೇವಾ ಕಾರ್ಯದ ವಿದ್ಯಾರ್ಥಿಗಳು ಹಾಗೂ ಸಂಘಟನೆಗಳ ಸದಸ್ಯರು, ಸ್ವಚ್ಛ ಬೆಳ್ಳಾರೆಯ ಅಂಗವಾಗಿ ಪೇಟೆಯ ಇಕ್ಕೆಲೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಇನ್ನಿತ್ತರ ಕಸಗಳನ್ನು ವಿಲೇವಾರಿ ಮಾಡಿ ಸ್ವಚ್ಛತೆಗೈದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

7 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

9 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

11 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

12 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

24 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago