Advertisement
ಜಿಲ್ಲೆ

ಸ್ವತಂತ್ರ ಕಡಬ ತಾಲೂಕು ಪಂಚಾಯತ್ ರಚನೆಗೆ ಸರಕಾರದ ಹಸಿರು ನಿಶಾನೆ

Share

ಕಡಬ: ನೂತನ ಕಡಬ ತಾಲೂಕು ಉದ್ಘಾಟನೆಯಾಗಿ ಅನುಷ್ಠಾನ ಕಾರ್ಯಗಳು ಪ್ರಗತಿಯಲ್ಲಿರುವಂತೆಯೇ ಸ್ವತಂತ್ರ ಕಡಬ ತಾಲೂಕು ಪಂಚಾಯತ್ ರಚನೆಗೆ ಸರಕಾರವು ಹಸಿರುನಿಶಾನೆ ನೀಡಿದೆ.
ರಾಜ್ಯದಲ್ಲಿ ರಚನೆಯಾಗಿರುವ 50 ಹೊಸ ತಾಲೂಕುಗಳಲ್ಲಿ ಪ್ರತ್ಯೇಕ ತಾಲೂಕು ಪಂಚಾಯತ್ ವ್ಯವಸ್ಥೆಗಾಗಿ ಪ್ರತೀ ತಾಲೂಕಿಗೆ 14 ಹುದ್ದೆಗಳಂತೆ 700 ಹುದ್ದೆಗಳನ್ನು ಸೃಷ್ಟಿಯಾಗಲಿದ್ದು, ಈ ಕುರಿತು ಜೂ. 12 ರಂದು ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
ಪ್ರಸ್ತುತ ಪುತ್ತೂರು ಹಾಗೂ ಸುಳ್ಯ ತಾಲೂಕು ಪಂಚಾಯತ್‍ನ ವ್ಯಾಪ್ತಿಯಲ್ಲಿರುವ ಕಡಬ ತಾಲೂಕಿಗೆ ಸೇರ್ಪಡೆಯಾಗಿರುವ ಒಟ್ಟು 42 ಗ್ರಾಮಗಳನ್ನೊಳಗೊಂಡ 13 ತಾಲೂಕು ಪಂಚಾಯತ್ ಕ್ಷೇತ್ರಗಳನ್ನು ಸೇರಿಸಿ ಹೊಸ ಕಡಬ ತಾಲೂಕು ಪಂಚಾಯತ್ ಕಾರ್ಯಾರಂಭಿಸಲಿದೆ. ಹೊಸ ತಾಲೂಕು ಪಂಚಾಯತ್ ಕಚೇರಿ ತೆರೆಯಲು ಲಭ್ಯವಿರುವ ಕಟ್ಟಡ, ಕಾದಿರಿಸಲಾಗಿರುವ ಜಮೀನು ಇತ್ಯಾದಿ ಮಾಹಿತಿಗಳನ್ನು ಈಗಾಗಲೇ ಸರಕಾರಕ್ಕೆ ಕಳುಹಿಸಲಾಗಿದ್ದು, ಹೊಸ ವ್ಯವಸ್ಥೆಗೆ ಕ್ಷೇತ್ರಗಳನ್ನು ವಿಂಗಡಿಸುವ ಸಲುವಾಗಿ ಅಧಿಸೂಚನೆ ಪ್ರಕಟಗೊಳ್ಳಲಿದೆ.

ಕಡಬ ತಾಲೂಕು ಪಂಚಾಯತ್‍ಗೆ ಸೇರ್ಪಡೆಯಾಗಲಿರುವ ಕ್ಷೇತ್ರಗಳು:

ಪುತ್ತೂರು ತಾಲೂಕಿನ ಕಡಬ (ಕಡಬ, ಕೋಡಿಂಬಾಳ), ಕುಟ್ರುಪ್ಪಾಡಿ (ನೂಜಿಬಾಳ್ತಿಲ, ರೆಂಜಿಲಾಡಿ, ಕುಟ್ರುಪ್ಪಾಡಿ), ಐತ್ತೂರು (ಐತ್ತೂರು, ಕೊಣಾಜೆ, ಬಂಟ್ರ, 102 ನೆಕ್ಕಿಲಾಡಿ), ಬಿಳಿನೆಲೆ (ಬಿಳಿನೆಲೆ, ಶಿರಾಡಿ, ಶಿರಿಬಾಗಿಲು, ಕೊಂಬಾರು), ಗೋಳಿತೊಟ್ಟು (ಗೋಳಿತೊಟ್ಟು, ಆಲಂತಾಯ, ಹಳೆನೇರೆಂಕಿ), ಚಾರ್ವಾಕ (ಕಾಣಿಯೂರು, ದೋಳ್ಪಾಡಿ, ಚಾರ್ವಾಕ, ಕಾಯಿಮಣ, ಕುದ್ಮಾರು), ಸವಣೂರು (ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ, ಬೆಳಂದೂರು, ನೆಲ್ಯಾಡಿ (ನೆಲ್ಯಾಡಿ, ಕೊಣಾಲು), ಕೌಕ್ರಾಡಿ (ಕೌಕ್ರಾಡಿ, ಇಚ್ಲಂಪಾಡಿ, ಬಲ್ಯ), ಆಲಂಕಾರು (ಆಲಂಕಾರು, ಪೆರಾಬೆ, ಕುಂತೂರು), ರಾಮಕುಂಜ (ರಾಮಕುಂಜ, ಕೊೈಲ), ಸುಳ್ಯ ತಾಲೂಕಿನ ಸುಬ್ರಹ್ಮಣ್ಯ (ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು, ಬಲ್ಪ, ಕೇನ್ಯ) ಹಾಗೂ ಎಣ್ಮೂರು (ಎಣ್ಮೂರು, ಎಡಮಂಗಲ) ಕ್ಷೇತ್ರಗಳು ನೂತನ ಕಡಬ ತಾಲೂಕು ಪಂಚಾಯತ್‍ನ ವ್ಯಾಪ್ತಿಗೆ ಬರಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

22 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

22 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago