Advertisement
ಜಿಲ್ಲೆ

ಸ್ವತಂತ್ರ ಕಡಬ ತಾಲೂಕು ಪಂಚಾಯತ್ ರಚನೆಗೆ ಸರಕಾರದ ಹಸಿರು ನಿಶಾನೆ

Share

ಕಡಬ: ನೂತನ ಕಡಬ ತಾಲೂಕು ಉದ್ಘಾಟನೆಯಾಗಿ ಅನುಷ್ಠಾನ ಕಾರ್ಯಗಳು ಪ್ರಗತಿಯಲ್ಲಿರುವಂತೆಯೇ ಸ್ವತಂತ್ರ ಕಡಬ ತಾಲೂಕು ಪಂಚಾಯತ್ ರಚನೆಗೆ ಸರಕಾರವು ಹಸಿರುನಿಶಾನೆ ನೀಡಿದೆ.
ರಾಜ್ಯದಲ್ಲಿ ರಚನೆಯಾಗಿರುವ 50 ಹೊಸ ತಾಲೂಕುಗಳಲ್ಲಿ ಪ್ರತ್ಯೇಕ ತಾಲೂಕು ಪಂಚಾಯತ್ ವ್ಯವಸ್ಥೆಗಾಗಿ ಪ್ರತೀ ತಾಲೂಕಿಗೆ 14 ಹುದ್ದೆಗಳಂತೆ 700 ಹುದ್ದೆಗಳನ್ನು ಸೃಷ್ಟಿಯಾಗಲಿದ್ದು, ಈ ಕುರಿತು ಜೂ. 12 ರಂದು ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
ಪ್ರಸ್ತುತ ಪುತ್ತೂರು ಹಾಗೂ ಸುಳ್ಯ ತಾಲೂಕು ಪಂಚಾಯತ್‍ನ ವ್ಯಾಪ್ತಿಯಲ್ಲಿರುವ ಕಡಬ ತಾಲೂಕಿಗೆ ಸೇರ್ಪಡೆಯಾಗಿರುವ ಒಟ್ಟು 42 ಗ್ರಾಮಗಳನ್ನೊಳಗೊಂಡ 13 ತಾಲೂಕು ಪಂಚಾಯತ್ ಕ್ಷೇತ್ರಗಳನ್ನು ಸೇರಿಸಿ ಹೊಸ ಕಡಬ ತಾಲೂಕು ಪಂಚಾಯತ್ ಕಾರ್ಯಾರಂಭಿಸಲಿದೆ. ಹೊಸ ತಾಲೂಕು ಪಂಚಾಯತ್ ಕಚೇರಿ ತೆರೆಯಲು ಲಭ್ಯವಿರುವ ಕಟ್ಟಡ, ಕಾದಿರಿಸಲಾಗಿರುವ ಜಮೀನು ಇತ್ಯಾದಿ ಮಾಹಿತಿಗಳನ್ನು ಈಗಾಗಲೇ ಸರಕಾರಕ್ಕೆ ಕಳುಹಿಸಲಾಗಿದ್ದು, ಹೊಸ ವ್ಯವಸ್ಥೆಗೆ ಕ್ಷೇತ್ರಗಳನ್ನು ವಿಂಗಡಿಸುವ ಸಲುವಾಗಿ ಅಧಿಸೂಚನೆ ಪ್ರಕಟಗೊಳ್ಳಲಿದೆ.

ಕಡಬ ತಾಲೂಕು ಪಂಚಾಯತ್‍ಗೆ ಸೇರ್ಪಡೆಯಾಗಲಿರುವ ಕ್ಷೇತ್ರಗಳು:

ಪುತ್ತೂರು ತಾಲೂಕಿನ ಕಡಬ (ಕಡಬ, ಕೋಡಿಂಬಾಳ), ಕುಟ್ರುಪ್ಪಾಡಿ (ನೂಜಿಬಾಳ್ತಿಲ, ರೆಂಜಿಲಾಡಿ, ಕುಟ್ರುಪ್ಪಾಡಿ), ಐತ್ತೂರು (ಐತ್ತೂರು, ಕೊಣಾಜೆ, ಬಂಟ್ರ, 102 ನೆಕ್ಕಿಲಾಡಿ), ಬಿಳಿನೆಲೆ (ಬಿಳಿನೆಲೆ, ಶಿರಾಡಿ, ಶಿರಿಬಾಗಿಲು, ಕೊಂಬಾರು), ಗೋಳಿತೊಟ್ಟು (ಗೋಳಿತೊಟ್ಟು, ಆಲಂತಾಯ, ಹಳೆನೇರೆಂಕಿ), ಚಾರ್ವಾಕ (ಕಾಣಿಯೂರು, ದೋಳ್ಪಾಡಿ, ಚಾರ್ವಾಕ, ಕಾಯಿಮಣ, ಕುದ್ಮಾರು), ಸವಣೂರು (ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ, ಬೆಳಂದೂರು, ನೆಲ್ಯಾಡಿ (ನೆಲ್ಯಾಡಿ, ಕೊಣಾಲು), ಕೌಕ್ರಾಡಿ (ಕೌಕ್ರಾಡಿ, ಇಚ್ಲಂಪಾಡಿ, ಬಲ್ಯ), ಆಲಂಕಾರು (ಆಲಂಕಾರು, ಪೆರಾಬೆ, ಕುಂತೂರು), ರಾಮಕುಂಜ (ರಾಮಕುಂಜ, ಕೊೈಲ), ಸುಳ್ಯ ತಾಲೂಕಿನ ಸುಬ್ರಹ್ಮಣ್ಯ (ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು, ಬಲ್ಪ, ಕೇನ್ಯ) ಹಾಗೂ ಎಣ್ಮೂರು (ಎಣ್ಮೂರು, ಎಡಮಂಗಲ) ಕ್ಷೇತ್ರಗಳು ನೂತನ ಕಡಬ ತಾಲೂಕು ಪಂಚಾಯತ್‍ನ ವ್ಯಾಪ್ತಿಗೆ ಬರಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

6 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

15 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

16 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

23 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 day ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

1 day ago