Advertisement
ಜಿಲ್ಲೆ

ಸ್ವತಂತ್ರ ಕಡಬ ತಾಲೂಕು ಪಂಚಾಯತ್ ರಚನೆಗೆ ಸರಕಾರದ ಹಸಿರು ನಿಶಾನೆ

Share

ಕಡಬ: ನೂತನ ಕಡಬ ತಾಲೂಕು ಉದ್ಘಾಟನೆಯಾಗಿ ಅನುಷ್ಠಾನ ಕಾರ್ಯಗಳು ಪ್ರಗತಿಯಲ್ಲಿರುವಂತೆಯೇ ಸ್ವತಂತ್ರ ಕಡಬ ತಾಲೂಕು ಪಂಚಾಯತ್ ರಚನೆಗೆ ಸರಕಾರವು ಹಸಿರುನಿಶಾನೆ ನೀಡಿದೆ.
ರಾಜ್ಯದಲ್ಲಿ ರಚನೆಯಾಗಿರುವ 50 ಹೊಸ ತಾಲೂಕುಗಳಲ್ಲಿ ಪ್ರತ್ಯೇಕ ತಾಲೂಕು ಪಂಚಾಯತ್ ವ್ಯವಸ್ಥೆಗಾಗಿ ಪ್ರತೀ ತಾಲೂಕಿಗೆ 14 ಹುದ್ದೆಗಳಂತೆ 700 ಹುದ್ದೆಗಳನ್ನು ಸೃಷ್ಟಿಯಾಗಲಿದ್ದು, ಈ ಕುರಿತು ಜೂ. 12 ರಂದು ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
ಪ್ರಸ್ತುತ ಪುತ್ತೂರು ಹಾಗೂ ಸುಳ್ಯ ತಾಲೂಕು ಪಂಚಾಯತ್‍ನ ವ್ಯಾಪ್ತಿಯಲ್ಲಿರುವ ಕಡಬ ತಾಲೂಕಿಗೆ ಸೇರ್ಪಡೆಯಾಗಿರುವ ಒಟ್ಟು 42 ಗ್ರಾಮಗಳನ್ನೊಳಗೊಂಡ 13 ತಾಲೂಕು ಪಂಚಾಯತ್ ಕ್ಷೇತ್ರಗಳನ್ನು ಸೇರಿಸಿ ಹೊಸ ಕಡಬ ತಾಲೂಕು ಪಂಚಾಯತ್ ಕಾರ್ಯಾರಂಭಿಸಲಿದೆ. ಹೊಸ ತಾಲೂಕು ಪಂಚಾಯತ್ ಕಚೇರಿ ತೆರೆಯಲು ಲಭ್ಯವಿರುವ ಕಟ್ಟಡ, ಕಾದಿರಿಸಲಾಗಿರುವ ಜಮೀನು ಇತ್ಯಾದಿ ಮಾಹಿತಿಗಳನ್ನು ಈಗಾಗಲೇ ಸರಕಾರಕ್ಕೆ ಕಳುಹಿಸಲಾಗಿದ್ದು, ಹೊಸ ವ್ಯವಸ್ಥೆಗೆ ಕ್ಷೇತ್ರಗಳನ್ನು ವಿಂಗಡಿಸುವ ಸಲುವಾಗಿ ಅಧಿಸೂಚನೆ ಪ್ರಕಟಗೊಳ್ಳಲಿದೆ.

ಕಡಬ ತಾಲೂಕು ಪಂಚಾಯತ್‍ಗೆ ಸೇರ್ಪಡೆಯಾಗಲಿರುವ ಕ್ಷೇತ್ರಗಳು:

ಪುತ್ತೂರು ತಾಲೂಕಿನ ಕಡಬ (ಕಡಬ, ಕೋಡಿಂಬಾಳ), ಕುಟ್ರುಪ್ಪಾಡಿ (ನೂಜಿಬಾಳ್ತಿಲ, ರೆಂಜಿಲಾಡಿ, ಕುಟ್ರುಪ್ಪಾಡಿ), ಐತ್ತೂರು (ಐತ್ತೂರು, ಕೊಣಾಜೆ, ಬಂಟ್ರ, 102 ನೆಕ್ಕಿಲಾಡಿ), ಬಿಳಿನೆಲೆ (ಬಿಳಿನೆಲೆ, ಶಿರಾಡಿ, ಶಿರಿಬಾಗಿಲು, ಕೊಂಬಾರು), ಗೋಳಿತೊಟ್ಟು (ಗೋಳಿತೊಟ್ಟು, ಆಲಂತಾಯ, ಹಳೆನೇರೆಂಕಿ), ಚಾರ್ವಾಕ (ಕಾಣಿಯೂರು, ದೋಳ್ಪಾಡಿ, ಚಾರ್ವಾಕ, ಕಾಯಿಮಣ, ಕುದ್ಮಾರು), ಸವಣೂರು (ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ, ಬೆಳಂದೂರು, ನೆಲ್ಯಾಡಿ (ನೆಲ್ಯಾಡಿ, ಕೊಣಾಲು), ಕೌಕ್ರಾಡಿ (ಕೌಕ್ರಾಡಿ, ಇಚ್ಲಂಪಾಡಿ, ಬಲ್ಯ), ಆಲಂಕಾರು (ಆಲಂಕಾರು, ಪೆರಾಬೆ, ಕುಂತೂರು), ರಾಮಕುಂಜ (ರಾಮಕುಂಜ, ಕೊೈಲ), ಸುಳ್ಯ ತಾಲೂಕಿನ ಸುಬ್ರಹ್ಮಣ್ಯ (ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು, ಬಲ್ಪ, ಕೇನ್ಯ) ಹಾಗೂ ಎಣ್ಮೂರು (ಎಣ್ಮೂರು, ಎಡಮಂಗಲ) ಕ್ಷೇತ್ರಗಳು ನೂತನ ಕಡಬ ತಾಲೂಕು ಪಂಚಾಯತ್‍ನ ವ್ಯಾಪ್ತಿಗೆ ಬರಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

7 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

7 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago