ಸ್ವರ್ಣಧಾರ ಕೋಳಿ ಸಾಕಾಣೆ : ಕರಾವಳಿಯಲ್ಲಿ ಹೆಚ್ಚುತ್ತಿರುವ ಆಸಕ್ತಿ

October 26, 2019
10:00 AM

ಮಂಗಳೂರು :-  ಭಾರತೀಯ ಕೃಷಿ ಸಂಶೋಧನಾ ಪರಿಷತ್‍ನ ಅಂಗ ಸಂಸ್ಥೆಯಾದಂತಹ ಮಂಗಳೂರಿನ ಕಂಕನಾಡಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವರ್ಣಧಾರ ಕೋಳಿ ಸಾಕಾಣೆಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬೀದರ್‍ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಅಭಿವೃದ್ಧಿ ಪಡಿಸಿದ ಸ್ವದೇಶಿ ತಳಿ ‘ಸ್ವರ್ಣಧಾರ’ ಕೋಳಿಗೆ ಜಿಲ್ಲೆಯಲ್ಲಿ ಬೇಡಿಕೆ ಹೆಚ್ಚುತ್ತಿದ್ದು, ಆಸಕ್ತ ರೈತರಿಗೆ ವೈಜ್ಞಾನಿಕ ರೀತಿಯಲ್ಲಿ ಕೋಳಿ ಸಾಕಾಣೆಮಾಡುವ ಸಲುವಾಗಿ ತರಬೇತಿ ನೀಡಲಾಯಿತು. 8 ವಾರಗಳಲ್ಲಿ ಸ್ವರ್ಣಧಾರ ಕೋಳಿಯು 1 ರಿಂದ 1.2 ಕೆ. ಜಿ. ತೂಕ ಬೆಳೆಯುವ ಸಾಮತ್ರ್ಯವಿದ್ದು ನಾಟಿಕೋಳಿಗಳಿಗೆ ಹೊಲಿಸಿದಾಗ ಎರಡುಪಟ್ಟು ಹೆಚ್ಚಾಗಿದೆ. ವಾರ್ಷಿಕವಾಗಿ 180-200 ಮೊಟ್ಟೆ ಉತ್ಪಾದಿಸುವ ಸಾಮಥ್ರ್ಯವಿರುವ ಈ ತಳಿಗೆ ಕರಾವಳಿಯಲ್ಲಿ ರೈತನು ಯಾವುದೇ ಪಂಜರದ ಸಹಾಯವಿಲ್ಲದೆ ಸಣ್ಣಪ್ರಮಾಣದೊಂದಿಗೆ ಹಿತ್ತಲಿನಲ್ಲಿ ಸಾಕಬಹುದಾಗಿದೆ.

ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಪಶುವೈದ್ಯಾಧಿಕಾರಿ ಡಾ|| ಗುರುಮೂರ್ತಿ ಘಟ್ಟ ಪ್ರದೇಶದಲ್ಲಿ ಪ್ರಚಲಿತವಾಗಿರುವ ಈ ಕೋಳಿಗಳ ಸಾಕಾಣೆಗೆ ಈಗ ಕರಾವಳಿಯಲ್ಲೂ ಆಸಕ್ತಿ ಹೆಚ್ಚುತ್ತಿದೆಯೆಂದು ಅಭಿಪ್ರಾಯಪಟ್ಟರು. ವೈಜ್ಞಾನಿಕವಾಗಿ ಸಾಕುವ ವಿಧಾನಗಳು, ಮರಿ ಮಾಡುವುದು, ಅಹಾರ ನೀಡುವ ಪದ್ಧತಿಗಳು, ರೋಗಗಳ ನಿರ್ವಹಣೆ, ಕೋಳಿ ತ್ಯಾಜದ ನಿರ್ವಹಣೆ ಮತ್ತಿತರ ವಿವರಗಳನ್ನು ರೈತರಿಗೆ ನೀಡಿದರು.

ಇದೇ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮೀನುಗಾರಿಕಾ ವಿಜ್ಞಾನಿ ಡಾ|| ಎನ್. ಚೇತನ್ ಕೋಳಿ ಸಾಕಾಣೆಕೆಯಿಂದ ಆರ್ಥಿಕ ಅಭಿವೃದ್ಧಿಯ ಕುರಿತು ಮಾತನಾಡಿದರು. ಗ್ರಾಮೀಣ ಭಾಗದ ಜನರಿಗೆ ಕಡಿಮೆ ಬಂಡವಾಳದೋಂದಿಗೆ ಸುಲಭವಾಗಿ ಪೌಷ್ಟಿಕ ಅಹಾರವು ದೊರೆಯುವಂತೆ ಮಾಡಲು ಸುಧಾರಿತ ನಾಟಿ ಕೋಳಿ ಸಾಕಾಣೆಮಾಡುವ ಬಗ್ಗೆ ಅರಿವು ಮೂಡಿಸುತ್ತಿರುವ ಕೃಷಿ ವಿಜ್ಞಾನ ಕೇಂದ್ರದ ಯೋಜನೆಗಳನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ಶಾಸ್ತ್ರ ವಿಜ್ಞಾನಿ ಡಾ||. ಮಲ್ಲಿಕಾರ್ಜುನ ಹಾಗು ಇತರೆ ಸಿಬ್ಬಂದಿಯಾದ ಸತೀಶ್, ದೀಪ,   ಸೌಮ್ಯ,   ವಿದ್ಯಾವತಿ, ಸೀತಾರಾಮ್, ಸೊಮಶೇಕರೈಯ್ಯ, ಅಶ್ವಿಥ್ ಉಪಸ್ತಿತರಿದ್ದರು. ತರಬೇತಿಯ ನಂತರ ಸರ್ಕಾರಿ ದರದಲ್ಲಿ ಕೋಳಿಮರಿಗಳನ್ನು ಮಾರಾಟ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror