ಸುದ್ದಿಗಳು

ಸ್ವರ್ಣಧಾರ ಕೋಳಿ ಸಾಕಾಣೆ : ಕರಾವಳಿಯಲ್ಲಿ ಹೆಚ್ಚುತ್ತಿರುವ ಆಸಕ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು :-  ಭಾರತೀಯ ಕೃಷಿ ಸಂಶೋಧನಾ ಪರಿಷತ್‍ನ ಅಂಗ ಸಂಸ್ಥೆಯಾದಂತಹ ಮಂಗಳೂರಿನ ಕಂಕನಾಡಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವರ್ಣಧಾರ ಕೋಳಿ ಸಾಕಾಣೆಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement
Advertisement

ಬೀದರ್‍ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಅಭಿವೃದ್ಧಿ ಪಡಿಸಿದ ಸ್ವದೇಶಿ ತಳಿ ‘ಸ್ವರ್ಣಧಾರ’ ಕೋಳಿಗೆ ಜಿಲ್ಲೆಯಲ್ಲಿ ಬೇಡಿಕೆ ಹೆಚ್ಚುತ್ತಿದ್ದು, ಆಸಕ್ತ ರೈತರಿಗೆ ವೈಜ್ಞಾನಿಕ ರೀತಿಯಲ್ಲಿ ಕೋಳಿ ಸಾಕಾಣೆಮಾಡುವ ಸಲುವಾಗಿ ತರಬೇತಿ ನೀಡಲಾಯಿತು. 8 ವಾರಗಳಲ್ಲಿ ಸ್ವರ್ಣಧಾರ ಕೋಳಿಯು 1 ರಿಂದ 1.2 ಕೆ. ಜಿ. ತೂಕ ಬೆಳೆಯುವ ಸಾಮತ್ರ್ಯವಿದ್ದು ನಾಟಿಕೋಳಿಗಳಿಗೆ ಹೊಲಿಸಿದಾಗ ಎರಡುಪಟ್ಟು ಹೆಚ್ಚಾಗಿದೆ. ವಾರ್ಷಿಕವಾಗಿ 180-200 ಮೊಟ್ಟೆ ಉತ್ಪಾದಿಸುವ ಸಾಮಥ್ರ್ಯವಿರುವ ಈ ತಳಿಗೆ ಕರಾವಳಿಯಲ್ಲಿ ರೈತನು ಯಾವುದೇ ಪಂಜರದ ಸಹಾಯವಿಲ್ಲದೆ ಸಣ್ಣಪ್ರಮಾಣದೊಂದಿಗೆ ಹಿತ್ತಲಿನಲ್ಲಿ ಸಾಕಬಹುದಾಗಿದೆ.

ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಪಶುವೈದ್ಯಾಧಿಕಾರಿ ಡಾ|| ಗುರುಮೂರ್ತಿ ಘಟ್ಟ ಪ್ರದೇಶದಲ್ಲಿ ಪ್ರಚಲಿತವಾಗಿರುವ ಈ ಕೋಳಿಗಳ ಸಾಕಾಣೆಗೆ ಈಗ ಕರಾವಳಿಯಲ್ಲೂ ಆಸಕ್ತಿ ಹೆಚ್ಚುತ್ತಿದೆಯೆಂದು ಅಭಿಪ್ರಾಯಪಟ್ಟರು. ವೈಜ್ಞಾನಿಕವಾಗಿ ಸಾಕುವ ವಿಧಾನಗಳು, ಮರಿ ಮಾಡುವುದು, ಅಹಾರ ನೀಡುವ ಪದ್ಧತಿಗಳು, ರೋಗಗಳ ನಿರ್ವಹಣೆ, ಕೋಳಿ ತ್ಯಾಜದ ನಿರ್ವಹಣೆ ಮತ್ತಿತರ ವಿವರಗಳನ್ನು ರೈತರಿಗೆ ನೀಡಿದರು.

ಇದೇ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮೀನುಗಾರಿಕಾ ವಿಜ್ಞಾನಿ ಡಾ|| ಎನ್. ಚೇತನ್ ಕೋಳಿ ಸಾಕಾಣೆಕೆಯಿಂದ ಆರ್ಥಿಕ ಅಭಿವೃದ್ಧಿಯ ಕುರಿತು ಮಾತನಾಡಿದರು. ಗ್ರಾಮೀಣ ಭಾಗದ ಜನರಿಗೆ ಕಡಿಮೆ ಬಂಡವಾಳದೋಂದಿಗೆ ಸುಲಭವಾಗಿ ಪೌಷ್ಟಿಕ ಅಹಾರವು ದೊರೆಯುವಂತೆ ಮಾಡಲು ಸುಧಾರಿತ ನಾಟಿ ಕೋಳಿ ಸಾಕಾಣೆಮಾಡುವ ಬಗ್ಗೆ ಅರಿವು ಮೂಡಿಸುತ್ತಿರುವ ಕೃಷಿ ವಿಜ್ಞಾನ ಕೇಂದ್ರದ ಯೋಜನೆಗಳನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ಶಾಸ್ತ್ರ ವಿಜ್ಞಾನಿ ಡಾ||. ಮಲ್ಲಿಕಾರ್ಜುನ ಹಾಗು ಇತರೆ ಸಿಬ್ಬಂದಿಯಾದ ಸತೀಶ್, ದೀಪ,   ಸೌಮ್ಯ,   ವಿದ್ಯಾವತಿ, ಸೀತಾರಾಮ್, ಸೊಮಶೇಕರೈಯ್ಯ, ಅಶ್ವಿಥ್ ಉಪಸ್ತಿತರಿದ್ದರು. ತರಬೇತಿಯ ನಂತರ ಸರ್ಕಾರಿ ದರದಲ್ಲಿ ಕೋಳಿಮರಿಗಳನ್ನು ಮಾರಾಟ ಮಾಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

6 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

10 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

12 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

12 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

12 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

14 hours ago