ಸುಳ್ಯ: ಚಾಲ್ತಿಯಲ್ಲಿರುವ ಯಾವುದೇ ಕಾನೂನನ್ನು ಮೀರಿ ಮಾಡಿದ ಕೃತ್ಯ ಅಥವಾ ಘಟನೆ ಅಪರಾಧವೆನಿಸುತ್ತದೆ. ಹಾಗಾಗಿ ಸ್ವಸ್ಥ ಬದುಕಿಗೆ ನಿಯಮಗಳ ಪಾಲನೆ ಅಗತ್ಯ ಎಂದು ಸುಳ್ಯ ವೃತ್ತ ನಿರೀಕ್ಷಕ ನವೀನ್ಚಂದ್ರ ಜೋಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ ಅಪರಾಧ ತಡೆ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನದಲ್ಲಿ ಅಪರಾಧಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಯಾವ ವ್ಯಕ್ತಿಗೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಕ್ಕೆ ಅಡೆತಡೆಯಾಗುವುದೋ ಆಗ ಅಪರಾಧಗಳು ಪ್ರಾರಂಭವಾಗುತ್ತವೆ. ಎಲ್ಲರೂ ಪ್ರಯತ್ನಪಟ್ಟರೆ ಅಪರಾಧ ಪ್ರಕರಣವನ್ನು ತಡೆಗಟ್ಟಬಹುದು. ಹಾಗಾಗಿ ಅದರ ಬಗ್ಗೆ ಮಾಹಿತಿ ಪಡೆಯಬೇಕಾದ ಅಗತ್ಯವಿದೆ ಎಂದರು.
ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಪೋಲೀಸ್ ಕಾನ್ಸ್ ಟೇಬಲ್ ಭೀಮನಗೌಡ ಬಿರಾದಾರ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀಧರ್ ವಿ, ರೆಡ್ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತೇಜಸ್ವಿನಿ ಮತ್ತು ಮೌನ ಪ್ರಾರ್ಥಿಸಿದರು. ಮೌನವಿ ಸ್ವಾಗತಿಸಿ, ಮೌನ ವಂದಿಸಿದರು. ಕಾವ್ಯಾ ಕೆ ಡಿ ಕಾರ್ಯಕ್ರಮ ನಿರೂಪಿಸಿದರು. ಮಾಹಿತಿ ಕಾರ್ಯಕ್ರಮದ ನಂತರ ಸಂವಾದ ಚರ್ಚೆ ನಡೆಯಿತು.
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…