Advertisement
ಸುದ್ದಿಗಳು

ಸ್ವಸ್ಥ ಬದುಕಿಗೆ ನಿಯಮಗಳ ಪಾಲನೆ ಅಗತ್ಯ – ವೃತ್ತ ನಿರೀಕ್ಷಕ ನವೀನಚಂದ್ರಜೋಗಿ

Share

ಸುಳ್ಯ: ಚಾಲ್ತಿಯಲ್ಲಿರುವ ಯಾವುದೇ ಕಾನೂನನ್ನು ಮೀರಿ ಮಾಡಿದ ಕೃತ್ಯ ಅಥವಾ ಘಟನೆ ಅಪರಾಧವೆನಿಸುತ್ತದೆ. ಹಾಗಾಗಿ ಸ್ವಸ್ಥ ಬದುಕಿಗೆ ನಿಯಮಗಳ ಪಾಲನೆ ಅಗತ್ಯ ಎಂದು ಸುಳ್ಯ ವೃತ್ತ ನಿರೀಕ್ಷಕ ನವೀನ್‍ಚಂದ್ರ ಜೋಗಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ ಅಪರಾಧ ತಡೆ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನದಲ್ಲಿ ಅಪರಾಧಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಯಾವ ವ್ಯಕ್ತಿಗೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಕ್ಕೆ ಅಡೆತಡೆಯಾಗುವುದೋ ಆಗ ಅಪರಾಧಗಳು ಪ್ರಾರಂಭವಾಗುತ್ತವೆ. ಎಲ್ಲರೂ ಪ್ರಯತ್ನಪಟ್ಟರೆ ಅಪರಾಧ ಪ್ರಕರಣವನ್ನು ತಡೆಗಟ್ಟಬಹುದು. ಹಾಗಾಗಿ ಅದರ ಬಗ್ಗೆ ಮಾಹಿತಿ ಪಡೆಯಬೇಕಾದ ಅಗತ್ಯವಿದೆ ಎಂದರು.

ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಪೋಲೀಸ್ ಕಾನ್ಸ್ ಟೇಬಲ್ ಭೀಮನಗೌಡ ಬಿರಾದಾರ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀಧರ್ ವಿ, ರೆಡ್‍ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತೇಜಸ್ವಿನಿ ಮತ್ತು ಮೌನ ಪ್ರಾರ್ಥಿಸಿದರು. ಮೌನವಿ ಸ್ವಾಗತಿಸಿ, ಮೌನ ವಂದಿಸಿದರು. ಕಾವ್ಯಾ ಕೆ ಡಿ ಕಾರ್ಯಕ್ರಮ ನಿರೂಪಿಸಿದರು. ಮಾಹಿತಿ ಕಾರ್ಯಕ್ರಮದ ನಂತರ ಸಂವಾದ ಚರ್ಚೆ ನಡೆಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago