ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ ಮಾಡಿದ್ದೂ ಅಲ್ಲದೆ ಶಾಲೆ ಮತ್ತೆ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಕಡಪಳ ಧ್ವಜಾರೋಹಣ ಮಾಡಿ ಶುಭಹಾರೈಸಿದರು. ಈ ಸಂದರ್ಭ ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಪುಷ್ಪಕರ ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆ ಸುಂದರಿ, ತಾಯಂದಿರ ಸಮಿತಿ ಅಧ್ಯಕ್ಷೆ ನಿರ್ಮಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಯುವಕ ಮಂಡಲ ಮಾವಿನಕಟ್ಟೆ ಜಯಂತ,ಶಾಲಾ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹಾಜರಿದರು.
ಬಳಿಕ ಮಕ್ಕಳಿಂದ ಭಾಷಣ ದೇಶಭಕ್ತಿ ಗೀತೆ ಹಾಗೂ ನೃತ್ಯಕ್ಕೆ ಹೆಜ್ಜೆಹಾಕಿದರು. ಮಕ್ಕಳಿಂದ ಇಂಗ್ಲಿಷ್ ನಲ್ಲಿ ಕಾರ್ಯಕ್ರಮ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಮಾಡಿದರು.ಮಕ್ಕಳ ಇಂಗ್ಲಿಷ್ ಭಾಷಣ, ಸ್ವಾಗತ ಮಾಡುವ ರೀತಿ ನೋಡಿ ಮೆಚ್ಚುಗೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಠಾಣೆಯ ಸಿಬ್ಬಂದಿ ರೋಹಿತ್ ಹಾಜರಿದ್ದರು. ಇದೇ ಸಂದರ್ಭ ರೂ 3000 ಮೌಲ್ಯವನ್ನು 1 ನೇ ತರಗತಿಯ ಮಕ್ಕಳ ನಿರಖು ಠೇವಣಿ ನೀಡಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…