ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ ಮಾಡಿದ್ದೂ ಅಲ್ಲದೆ ಶಾಲೆ ಮತ್ತೆ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಕಡಪಳ ಧ್ವಜಾರೋಹಣ ಮಾಡಿ ಶುಭಹಾರೈಸಿದರು. ಈ ಸಂದರ್ಭ ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಪುಷ್ಪಕರ ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆ ಸುಂದರಿ, ತಾಯಂದಿರ ಸಮಿತಿ ಅಧ್ಯಕ್ಷೆ ನಿರ್ಮಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಯುವಕ ಮಂಡಲ ಮಾವಿನಕಟ್ಟೆ ಜಯಂತ,ಶಾಲಾ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹಾಜರಿದರು.
ಬಳಿಕ ಮಕ್ಕಳಿಂದ ಭಾಷಣ ದೇಶಭಕ್ತಿ ಗೀತೆ ಹಾಗೂ ನೃತ್ಯಕ್ಕೆ ಹೆಜ್ಜೆಹಾಕಿದರು. ಮಕ್ಕಳಿಂದ ಇಂಗ್ಲಿಷ್ ನಲ್ಲಿ ಕಾರ್ಯಕ್ರಮ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಮಾಡಿದರು.ಮಕ್ಕಳ ಇಂಗ್ಲಿಷ್ ಭಾಷಣ, ಸ್ವಾಗತ ಮಾಡುವ ರೀತಿ ನೋಡಿ ಮೆಚ್ಚುಗೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಠಾಣೆಯ ಸಿಬ್ಬಂದಿ ರೋಹಿತ್ ಹಾಜರಿದ್ದರು. ಇದೇ ಸಂದರ್ಭ ರೂ 3000 ಮೌಲ್ಯವನ್ನು 1 ನೇ ತರಗತಿಯ ಮಕ್ಕಳ ನಿರಖು ಠೇವಣಿ ನೀಡಿದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…