ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ ಮಾಡಿದ್ದೂ ಅಲ್ಲದೆ ಶಾಲೆ ಮತ್ತೆ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಕಡಪಳ ಧ್ವಜಾರೋಹಣ ಮಾಡಿ ಶುಭಹಾರೈಸಿದರು. ಈ ಸಂದರ್ಭ ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಪುಷ್ಪಕರ ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆ ಸುಂದರಿ, ತಾಯಂದಿರ ಸಮಿತಿ ಅಧ್ಯಕ್ಷೆ ನಿರ್ಮಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಯುವಕ ಮಂಡಲ ಮಾವಿನಕಟ್ಟೆ ಜಯಂತ,ಶಾಲಾ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹಾಜರಿದರು.
ಬಳಿಕ ಮಕ್ಕಳಿಂದ ಭಾಷಣ ದೇಶಭಕ್ತಿ ಗೀತೆ ಹಾಗೂ ನೃತ್ಯಕ್ಕೆ ಹೆಜ್ಜೆಹಾಕಿದರು. ಮಕ್ಕಳಿಂದ ಇಂಗ್ಲಿಷ್ ನಲ್ಲಿ ಕಾರ್ಯಕ್ರಮ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಮಾಡಿದರು.ಮಕ್ಕಳ ಇಂಗ್ಲಿಷ್ ಭಾಷಣ, ಸ್ವಾಗತ ಮಾಡುವ ರೀತಿ ನೋಡಿ ಮೆಚ್ಚುಗೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಠಾಣೆಯ ಸಿಬ್ಬಂದಿ ರೋಹಿತ್ ಹಾಜರಿದ್ದರು. ಇದೇ ಸಂದರ್ಭ ರೂ 3000 ಮೌಲ್ಯವನ್ನು 1 ನೇ ತರಗತಿಯ ಮಕ್ಕಳ ನಿರಖು ಠೇವಣಿ ನೀಡಿದರು.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.
ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.