ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ ಮಾಡಿದ್ದೂ ಅಲ್ಲದೆ ಶಾಲೆ ಮತ್ತೆ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಕಡಪಳ ಧ್ವಜಾರೋಹಣ ಮಾಡಿ ಶುಭಹಾರೈಸಿದರು. ಈ ಸಂದರ್ಭ ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಪುಷ್ಪಕರ ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆ ಸುಂದರಿ, ತಾಯಂದಿರ ಸಮಿತಿ ಅಧ್ಯಕ್ಷೆ ನಿರ್ಮಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಯುವಕ ಮಂಡಲ ಮಾವಿನಕಟ್ಟೆ ಜಯಂತ,ಶಾಲಾ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹಾಜರಿದರು.
ಬಳಿಕ ಮಕ್ಕಳಿಂದ ಭಾಷಣ ದೇಶಭಕ್ತಿ ಗೀತೆ ಹಾಗೂ ನೃತ್ಯಕ್ಕೆ ಹೆಜ್ಜೆಹಾಕಿದರು. ಮಕ್ಕಳಿಂದ ಇಂಗ್ಲಿಷ್ ನಲ್ಲಿ ಕಾರ್ಯಕ್ರಮ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಮಾಡಿದರು.ಮಕ್ಕಳ ಇಂಗ್ಲಿಷ್ ಭಾಷಣ, ಸ್ವಾಗತ ಮಾಡುವ ರೀತಿ ನೋಡಿ ಮೆಚ್ಚುಗೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಠಾಣೆಯ ಸಿಬ್ಬಂದಿ ರೋಹಿತ್ ಹಾಜರಿದ್ದರು. ಇದೇ ಸಂದರ್ಭ ರೂ 3000 ಮೌಲ್ಯವನ್ನು 1 ನೇ ತರಗತಿಯ ಮಕ್ಕಳ ನಿರಖು ಠೇವಣಿ ನೀಡಿದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…