Advertisement
MIRROR FOCUS

ಸ್ವಾತಂತ್ರ್ಯಕ್ಕೆ ಮೆರುಗು ಮೂಡುವುದೇ ಜವಾಬ್ದಾರಿಯ ತಳಹದಿಯಲ್ಲಿ…..

Share

ಸ್ವಾತಂತ್ರ್ಯದಿನ ಶುಭಾಶಯ. ಎಲ್ಲರಿಗೂ ಶುಭಾಶಯವನ್ನು ತಿಳಿಸುತ್ತಾ, ಈ ಸಂದರ್ಭ ನಮ್ಮ ಜವಾಬ್ದಾರಿ ಏನು ಎಂಬುದರ ಬಗ್ಗೆಯೂ ಅರಿಯಬೇಕಿದೆ. ಈ ಕಾರಣದಿಂದ ರಾಕೇಶ್ ಕುಮಾರ್ ಕಮ್ಮಜೆ ಅವರು ಲೇಖನವನ್ನು ಬರೆದಿದ್ದಾರೆ. ಈ ಕಡೆಗೆ ನಮ್ಮ ಬೆಳಕು…


ಸ್ವಾತಂತ್ರ್ಯ ಅನ್ನುವುದು ಸಕಲ ಜೀವರಾಶಿಗಳೂ ಸದಾ ಬಯಸುವ ಸಂಗತಿಯೇ ಹೌದು. ಅದರಲ್ಲೂ ಕಳೆದುಕೊಂಡ ಸ್ವಾತಂತ್ರ್ಯವನ್ನು ಮರಳಿ ಪಡೆದುಕೊಂಡವರಿಗೆ ಸ್ವಾತಂತ್ರ್ಯ ಉತ್ಸವವೆನಿಸುವುದರಲ್ಲಿ ಯಾವ ಸಂದೇಹವೂ ಇಲ್ಲ. ನಾವೂ ಹಾಗೆಯೇ!

ಸ್ವಾತಂತ್ರ್ಯ ಎಂಬ ಪದ ಬಿಡುಗಡೆ, ವಿಮೋಚನೆ ಎಂಬ ಅರ್ಥವನ್ನು ಹೊಮ್ಮಿಸುತ್ತದಾದರೂ, ಆ ಪದದ ಜತೆಜತೆಗೇ ಜವಾಬ್ದಾರಿ ಎಂಬ ಅಗೋಚರ ಭಾವವೂ ವ್ಯಕ್ತವಾಗುವುದನ್ನು ಗುರುತಿಸುವಲ್ಲಿ ಎಡವಬಾರದು. ಸ್ವಾತಂತ್ರ್ಯಕ್ಕೆ ಮೆರುಗು ಮೂಡುವುದೇ ಜವಾಬ್ದಾರಿಯ ತಳಹದಿಯಲ್ಲಿ ಎಂಬುದು ಸರ್ವವಿಧಿತ.

ನಮ್ಮ ದೇಶವೀಗ ವಿಶ್ವವಂದ್ಯ ಸ್ಥಾನವನ್ನು ಅಲಂಕರಿಸುವ ಸಾಮರ್ಥ್ಯವನ್ನು ಹೊರಸೂಸುತ್ತಿದೆ. ಅದಕ್ಕೆ ಬೇಕಾದ ಯೋಗ್ಯತೆಗಳೂ ಇಲ್ಲಿವೆ. ಆದರೆ ಇಂತಹ ಸಾರ್ವಭೌಮ ರಾಷ್ಟ್ರದ ಪ್ರಜೆಗಳು ಹೇಗಿರಬೇಕು? ಇತರರಿಗೆ ಮಾದರಿಯಾಗಲಿರುವವರ ಆಚಾರ, ವಿಚಾರ, ವ್ಯವಹಾರಗಳು ಎಂತಿರಬೇಕು? ಈ ಕುರಿತು ಆಲೋಚಿಸಲು ಇದು ಪ್ರಶಸ್ತ ಸಂದರ್ಭವೆನಿಸುತ್ತದೆ. ಹಾಗೆ ನೋಡಿದರೆ ದೇಶವೊಂದು ಉಚ್ರಾಯ ಸ್ಥಿತಿ ಅಥವ ಅಧಃಪತನ ಕಾಣುವುದಕ್ಕೆ ಅಲ್ಲಿನ ಜನರ ಮನಃಸ್ಥಿತಿಗಳೂ ಕಾರಣವಾಗುತ್ತವೆ ಎಂಬುದನ್ನು ಮರೆಯಬಾರದು. ಅಂದಹಾಗೆ, ನನ್ನ ದೇಶಕ್ಕೆ ನನ್ನ ಬಾಧ್ಯಸ್ಥಿಕೆ ಏನು ಎಂಬುದನ್ನು ನೆನಪು ಮಾಡುವುದಕ್ಕೇ ಈ ಸ್ವಾತಂತ್ರ್ಯ ದಿನಾಚರಣೆ ಬರುತ್ತಿದೆಯೇನೋ ಅನಿಸುತ್ತದೆ!

 

ರಾಕೇಶ್ ಕುಮಾರ್ ಕಮ್ಮಜೆ

ರಾಕೇಶ್ ಕುಮಾರ್ ಕಮ್ಮಜೆ

ಮುಖ್ಯಸ್ಥರು , ಪತ್ರಿಕೋದ್ಯಮ ವಿಭಾಗ

ವಿವೇಕಾನಂದ ಕಾಲೇಜು, ಪುತ್ತೂರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

6 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

7 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

23 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago