Advertisement
ಅನುಕ್ರಮ

ಸ್ವಾತಂತ್ರ್ಯೋತ್ಸವದ ಶುಭಾಶಯಗಳು | ಭಾಷಣಗಳಿಗೆ ಸೀಮಿತವಾಗದಿರಲಿ ನಮ್ಮ ಉತ್ಸಾಹ…..

Share
ಆಗಸ್ಟ್ 15 ಎಂದರೆ ದೇಶಕ್ಕೇ ಸಂಭ್ರಮ.  ಪ್ರತಿ  ಬಾರೀ  ಸ್ವಾತಂತ್ರ್ಯ ದಿನವೆಂದರೆ  ಶಾಲಾ ಮಕ್ಕಳಿಗೆ  ಉತ್ಸಾಹ. ಹಲವು ಚಟುವಟಿಕೆಗಳಿಗೆ  , ಸಂಭ್ರಮಗಳಿಗೆ  ವೇದಿಕೆ.
ಮಕ್ಕಳಿಗೆ  ವಿವಿಧ  ದೇಶ ನಾಯಕರ ವೇಷ ಹಾಕಿ  ಗಣ್ಯರಿಂದ ಧ್ವಜಾರೋಹಣ, ಭಾಷಣ, ಊರಿನುದ್ದಕ್ಕೂ ಮಕ್ಕಳ  ಮೆರವಣಿಗೆ
ಆದರೆ  ಈ ಬಾರಿ ಸಾರ್ವಜನಿಕ ಕಾರ್ಯಕ್ರಮ ಗಳಿಗೆ ನಿರ್ಬಂಧ. ಶಾಲೆಗಳ ಕಾರ್ಯಕ್ರಮಗಳು ಅಧ್ಯಾಪಕರು ಹಾಗೂ ಸಹ ಶಿಕ್ಷಕರಿಗೇ ಸೀಮಿತ.   ಸ್ವಾತಂತ್ರ್ಯ ದಿನಾಚರಣೆಯನ್ನು  ಇಷ್ಟು ವರ್ಷಗಳ ಇತಿಹಾಸದಲ್ಲಿ  ಬಹುಶಃ ಮೊದಲ ಬಾರಿಗೆ ಸರಳ ಹಾಗೂ  ಸೀಮಿತ ರೀತಿಯಲ್ಲಿ  ಆಚರಿಸಲಾಗುತ್ತಿದೆ.
ಎಷ್ಟೋ ವರುಷಗಳ ಹೋರಾಟ , ತ್ಯಾಗದ ಫಲ ಬ್ರಿಟಿಷ್ ಆಡಳಿತದಿಂದ ಬಿಡುಗಡೆ. ಸ್ವಾತಂತ್ರ್ಯದ  ಸವಿ ಭಾರತೀಯರದಾಯಿತು. ಸ್ವಾತಂತ್ರ್ಯ ದೊಂದಿಗೆ ಹಲವು ಸಮಸ್ಯೆಗಳೂ  ಸೃಷ್ಟಿಯಾದವು. ಅವುಗಳನ್ನೇಲ್ಲ ಪರಿಹರಿಸುವಲ್ಲಿ ಗಟ್ಟಿ ಮನಸಿನ  ನಾಯಕರುಗಳ ತ್ಯಾಗ,  ಬಲಿದಾನವನ್ನು ಎಂದಿಗೂ ಮರೆಯುವಂತಿಲ್ಲ.  ಸ್ವಾರ್ಥ ರಹಿತರಾಗಿ ಹೋರಾಡಿದ ನೇತಾಜಿಯವರು, ಪಟೇಲರು, ಲಾಲ್ ಬಹಾದ್ದೂರ್ ಶಾಸ್ತ್ರಿ ಯವರು  ಒಬ್ಬರೇ ಇಬ್ಬರೇ ಹಲವು ನಾಯಕರು, ಇವರೊಂದಿಗೆ ಎಷ್ಟೋ ಜನ ಅನಾಮಧೇಯ ಹೋರಾಟಗಾರರು. ಹೆಸರು, ಪದವಿಗಿಂತ ದೇಶವೇ ದೊಡ್ಡದೆಂದು  ಹೋರಾಡಿದವರು.
ಭಾರತವೀಗ  ಒಳ ಹೊರಗಿನ ಶತ್ರು ಗಳಿಂದ ಭೀತಿಯನ್ನೆದುರಿಸುತ್ತಿದೆ. ಹೊರಗಿನ ಶತ್ರುಗಳನ್ನಾದರು ಬಡಿದಟ್ಟ ಬಹುದು. ಒಳಗಿನ ಶತ್ರುಗಳನ್ನೇನು ಮಾಡೋಣ. ?. ಒಂದೆಡೆ  ಚೈನಾ ಕುಮ್ಮಕ್ಕಿನಿಂದ ತೊಂದರೆ ಕೊಡುತ್ತಿರುವ ಪಾಕಿಸ್ತಾನ, ಮತ್ತೊಂದೆಡೆ ಸ್ವತಃ ಚೈನಾ. ಎಲ್ಲೆಲ್ಲಿ ಸಾದ್ಯವೋ ಅಲ್ಲೆಲ್ಲಾ ಕಡೆ ಮೂಗು ತೂರಿಸುತ್ತಿರುವ ಚೈನಾ ಇಡೀ ಜಗತ್ತನ್ನೇ ತನ್ನ ಹಿಡಿತಕ್ಕೆ ತೆಗೆದು‌ ಕೊಳ್ಳ ಬಯಸುತ್ತದೆ. ಆದರೆ ನಮ್ಮ  ಪ್ರಧಾನಿ ಮೋದಿಯವರು ಅಷ್ಟು ಸುಲಭವಾಗಿ  ದೇಶವನ್ನು ಬಿಟ್ಟು ಕೊಡುವವರಲ್ಲ.  ಒಂದೆಡೆ ಶತ್ರು ರಾಷ್ಟ್ರಗಳು , ಮತ್ತೊಂದೆಡೆ ಕೊರೊನಾ ವೈರಸ್‌ ದೇಶವನ್ನು ಕಂಗಾಲು ಮಾಡಲು ಹವಣಿಸುತ್ತಿವೆ.  ಮಳೆ ಜೋರಾಗಿ ಸುರಿಯುತ್ತಾ ಸಮಸ್ಯೆಗಳನ್ನೇ  ಸೃಷ್ಟಿಸಲು ಹವಣಿಸಿದಂತಿದೆ.   ಈ ಸಂಧಿಗ್ದ ಸಮಯದಲ್ಲೂ  ಒಂದು ಉತ್ತಮ ಹೆಜ್ಜೆ ಇಟ್ಟಾಗಿದೆ. ದೇಶದ ಅಭಿವೃದ್ಧಿಯ ಪ್ರತಿಯೊಂದು ಕ್ಷೇತ್ರದಲ್ಲೂ ಸ್ವಾವಲಂಬನೆಯ ತ್ತ   ದೃಷ್ಟಿ ಬೀರಿಯಾಗಿದೆ. ಈ ಬಾರಿ ರಕ್ಷಣಾ     ಕ್ಷೇತ್ರದಲ್ಲಿ ಕೂಡ ಅಗತ್ಯ ಸಾಧನಗಳ ತಯಾರಿಕೆಯನ್ನು ನಾವೇ ಮಾಡೋಣವೆಂದು ರಕ್ಷಣಾ ಮಂತ್ರಿಯವರು ಘೋಷಣೆಯನ್ನು ಮಾಡಿದ್ದಾರೆ. ಇದಕ್ಕೆ ಅಗತ್ಯ ಮಾರ್ಗದರ್ಶನ ಪಡೆಯಲಿದ್ದಾರೆ.
ನಮ್ಮ ದೇಶ ಮೇಡ್ ಇನ್ ಇಂಡಿಯಾ  ಹೆಸರಿನಲ್ಲಿ ಪ್ರಜ್ವಲಿಸುವ ವಿಶ್ವಾಸ ಎಲ್ಲರಲ್ಲಿದೆ. ಎಣಿಸಲಾಗದ ಬದಲಾವಣೆಯನ್ನು ಪ್ರಪಂಚದೆಲ್ಲೆಡೆ ಕೊರೊನಾ ‌   ಈಗಾಗಲೇ ಮಾಡಿಯಾಗಿದೆ. ಅವಲಂಬಲನೆಯಿಂದ ಸ್ವಾವಲಂಬನೆಯ ಪಾಠ ಕೊರೊನಾ ಕಲಿಸಿದೆ. ಈ ವರ್ಷ ಬದಲಾದ ಜೀವನ ರೀತಿ , ಜೀವನ ನೀತಿ , ನಿಯಮಗಳನ್ನು   ಅಳವಡಿಸಿ ಕೊಳ್ಳಬೇಕಾಗಿದೆ.  ಬದಲಾದ ಸಂದರ್ಭಕ್ಕೆ‌ ಹೊಂದಿಕೊಳ್ಳಬೇಕಾಗಿದೆ.
ಸ್ವಾತಂತ್ರ್ಯೋತ್ಸವದ ಶುಭಾಶಯಗಳು.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

20 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

21 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

23 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

23 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago