ಸ್ವಾತಂತ್ರ್ಯ…….. ನೆನಪಿನಂಗಳದಿಂದ……

August 15, 2019
9:00 AM

ಪ್ರತಿವರ್ಷದಂತೆ ಇಂದು ಸಂಭ್ರಮದ ದಿನ… ಈ ಆಚರಣೆಗಾಗಿ ಎಲ್ಲ ದೇಶಭಕ್ತ ರ ಮನಸ್ಸು ಹಾತೊರೆಯುತ್ತಿದೆ…ಆದರೆ ನನ್ನ ಮನಸ್ಸು ಮರುಗುತ್ತಿದೆ… ಸ್ವಾತಂತ್ರ್ಯ ಎಂಬ ಪದದ ಅರ್ಥವೇನು? ಎಂದೂ ಇಂದಿಗೂ ಅರ್ಥವಾಗಿಲ್ಲ…

ಇಂದು‌ ಹೆತ್ತವರು,ಮಡದಿ ಮಕ್ಕಳನ್ನು ಬಿಟ್ಟು ದೇಶದೊಳಕ್ಕೆ ಪಾಪಿಗಳೆಲ್ಲಿ ನುಸುಳಿ ಬರುವರೋ ಎಂಬ ಆತಂಕದಲ್ಲಿ ಮೈಯೆಲ್ಲಾ ಕಣ್ಣಾಗಿಸಿಕೊಂಡು‌‌ ಕಾಯುತ್ತಿದ್ದಾರೆ.. ಸ್ವಾತಂತ್ರ್ಯದ ಸಂಭ್ರಮ ಕ್ಕೆ ತಿರಂಗ ಧ್ವಜವನ್ನು ಬಿಗಿಬಂದೋಬಸ್ತಿನಲ್ಲಿ‌ ಹಾರಿಸುವ ಪರಿಸ್ಥಿತಿ ನಮ್ಮದು.. ಆದರೂ ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ.. ನಾವು ಸ್ವತಂತ್ರ ರು,ಗಾಂಧೀಜಿಯವರು ಯಾವಾಗ ಹೆಣ್ಣು ಮಕ್ಕಳು ರಾತ್ರಿ ವೇಳೆಯಲ್ಲಿ ಒಬ್ಬಂಟಿಗರಾಗಿ ನಡೆಯುತ್ತಾರೋ ಅಂದು ದೇಶ ಸ್ವತಂತವಾದಂತೆ,ಎಂದಿದ್ದರು .ಎಷ್ಟು ಹೆಣ್ಣುಮಕ್ಕಳು ಈ‌‌ ಪವಿತ್ರ ಭಾರತಾಂಭೆಯ ಮಣ್ಣಿನಲ್ಲಿ ರಾತ್ರಿ ಹೊತ್ತು ನಡೆದಿದ್ದಾರೋ ಗೊತ್ತಿಲ್ಲ.. ಆದರೆ ಹಗಲು ಹೊತ್ತಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳ ಮೇಲೂ ಅತ್ಯಾಚಾರದಂತಹ ಘೋರ ಅಪರಾಧಗಳು ನಡೆಯುತ್ತಿರುವುದು ಸುಳ್ಳಲ್ಲ..ಸ್ವಾತಂತ್ರ್ಯ ಕ್ಕಾಗಿ ತಮ್ಮಲ್ಲಿರುವ ಹಣ ಚಿನ್ನಾಭರಣ ಎಲ್ಲವನ್ನೂ ಕೊಟ್ಟು ಈದೇಶಕ್ಕಾಗಿ‌ ಮಡಿದವರು ಅದೆಷ್ಟೋ ಮಂದಿ..ಆದರೆ ಇಂದು ಲೆಕ್ಕ ಇಲ್ಲದಷ್ಟು ಆಸ್ತಿ ಹಣ ಸಂಪಾದಿಸಿ ಮೆರೆಯುವವರು ಅದೆಷ್ಟೋ ಮಂದಿ.. ಹೇಳಲು ಹೊರಟರೆ ಮಗಿಯದ ಕತೆ..‌ನಾವು ಬ್ರಿಟಿಷರ ದಾಸ್ಯದಿಂದ ಮುಕ್ತಿ ಹೊಂದಿದ್ದೇವೆ ನಿಜ..‌ ಆದರೆ ಈ ಕ್ಷಣವೂ ನಾವು ಇನ್ಯಾರದೋ ಆಕ್ರಮಣ ದ ಭಯದಲ್ಲಿದ್ದೇವೆ.. ನಮ್ಮವರ ಕಪಿಮುಷ್ಟಿಯೊಳಗೆ ನಾವು ಬಂಧಿತರಾಗಿದ್ದೇವೆ…. ಬಹುಷ: ಸಂಪೂರ್ಣ ಸ್ವಾತಂತ್ರ್ಯ ಅಸಾಧ್ಯವೇನೋ….?

ಏನೇ ಇರಲಿ.. ನನ್ನೆಲ್ಲಾ ಮಿತ್ರರಿಗೆ ಸ್ವಾತಂತ್ರ್ಯೋತ್ಸವದ ಶುಭಾಷಯಗಳು….

ನಮ್ಮೆಲ್ಲರ ಸ್ವಾತಂತ್ರ್ಯ ಕ್ಕೆ ಕಾರಣೀಭೂತರಾದ ಎಲ್ಲರಿಗೂ ನಮಿಸುತ್ತಾ  ಆಚರಣೆಗೆ ಲೋಪ ಬರದಂತೆ ಮೈಯೆಲ್ಲಾ ಕಣ್ಣಾಗಿಸಿ ಮಳೆ ಚಳಿಯ ಹಂಗು ತೊರೆದು ಕಾಯುತ್ತಿರುವ ಎಲ್ಲಾ ಸಹೋದರ ಸೈನಿಕ ಬಾಂಧವರಿಗೆ ತಾಯಿ ಭಾರತಿ ಇನ್ನಷ್ಟು ಶಕ್ತಿ ತುಂಬಲಿ ಆಯಸ್ಸು ಆರೋಗ್ಯ ಕರುಣಿಸಲಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್
March 28, 2026
9:12 AM
by: ದ ರೂರಲ್ ಮಿರರ್.ಕಾಂ
ಸಂಸ್ಥೆಯ ನಿಜವಾದ ಶಕ್ತಿ : ಮಾನವ ಸಂಪನ್ಮೂಲವೇ ಯಶಸ್ಸಿನ ಮೂಲಾಧಾರ
March 27, 2026
2:05 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್
March 21, 2026
5:00 PM
by: ದಿವ್ಯ ಮಹೇಶ್
ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ : ಯುವಜನತೆಗೆ ಕಾಲದ ಕರೆಯೇ?
March 20, 2026
8:07 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror