Advertisement
ಅನುಕ್ರಮ

ಸ್ವಾತಂತ್ರ್ಯ…….. ನೆನಪಿನಂಗಳದಿಂದ……

Share

ಪ್ರತಿವರ್ಷದಂತೆ ಇಂದು ಸಂಭ್ರಮದ ದಿನ… ಈ ಆಚರಣೆಗಾಗಿ ಎಲ್ಲ ದೇಶಭಕ್ತ ರ ಮನಸ್ಸು ಹಾತೊರೆಯುತ್ತಿದೆ…ಆದರೆ ನನ್ನ ಮನಸ್ಸು ಮರುಗುತ್ತಿದೆ… ಸ್ವಾತಂತ್ರ್ಯ ಎಂಬ ಪದದ ಅರ್ಥವೇನು? ಎಂದೂ ಇಂದಿಗೂ ಅರ್ಥವಾಗಿಲ್ಲ…

ಇಂದು‌ ಹೆತ್ತವರು,ಮಡದಿ ಮಕ್ಕಳನ್ನು ಬಿಟ್ಟು ದೇಶದೊಳಕ್ಕೆ ಪಾಪಿಗಳೆಲ್ಲಿ ನುಸುಳಿ ಬರುವರೋ ಎಂಬ ಆತಂಕದಲ್ಲಿ ಮೈಯೆಲ್ಲಾ ಕಣ್ಣಾಗಿಸಿಕೊಂಡು‌‌ ಕಾಯುತ್ತಿದ್ದಾರೆ.. ಸ್ವಾತಂತ್ರ್ಯದ ಸಂಭ್ರಮ ಕ್ಕೆ ತಿರಂಗ ಧ್ವಜವನ್ನು ಬಿಗಿಬಂದೋಬಸ್ತಿನಲ್ಲಿ‌ ಹಾರಿಸುವ ಪರಿಸ್ಥಿತಿ ನಮ್ಮದು.. ಆದರೂ ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ.. ನಾವು ಸ್ವತಂತ್ರ ರು,ಗಾಂಧೀಜಿಯವರು ಯಾವಾಗ ಹೆಣ್ಣು ಮಕ್ಕಳು ರಾತ್ರಿ ವೇಳೆಯಲ್ಲಿ ಒಬ್ಬಂಟಿಗರಾಗಿ ನಡೆಯುತ್ತಾರೋ ಅಂದು ದೇಶ ಸ್ವತಂತವಾದಂತೆ,ಎಂದಿದ್ದರು .ಎಷ್ಟು ಹೆಣ್ಣುಮಕ್ಕಳು ಈ‌‌ ಪವಿತ್ರ ಭಾರತಾಂಭೆಯ ಮಣ್ಣಿನಲ್ಲಿ ರಾತ್ರಿ ಹೊತ್ತು ನಡೆದಿದ್ದಾರೋ ಗೊತ್ತಿಲ್ಲ.. ಆದರೆ ಹಗಲು ಹೊತ್ತಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳ ಮೇಲೂ ಅತ್ಯಾಚಾರದಂತಹ ಘೋರ ಅಪರಾಧಗಳು ನಡೆಯುತ್ತಿರುವುದು ಸುಳ್ಳಲ್ಲ..ಸ್ವಾತಂತ್ರ್ಯ ಕ್ಕಾಗಿ ತಮ್ಮಲ್ಲಿರುವ ಹಣ ಚಿನ್ನಾಭರಣ ಎಲ್ಲವನ್ನೂ ಕೊಟ್ಟು ಈದೇಶಕ್ಕಾಗಿ‌ ಮಡಿದವರು ಅದೆಷ್ಟೋ ಮಂದಿ..ಆದರೆ ಇಂದು ಲೆಕ್ಕ ಇಲ್ಲದಷ್ಟು ಆಸ್ತಿ ಹಣ ಸಂಪಾದಿಸಿ ಮೆರೆಯುವವರು ಅದೆಷ್ಟೋ ಮಂದಿ.. ಹೇಳಲು ಹೊರಟರೆ ಮಗಿಯದ ಕತೆ..‌ನಾವು ಬ್ರಿಟಿಷರ ದಾಸ್ಯದಿಂದ ಮುಕ್ತಿ ಹೊಂದಿದ್ದೇವೆ ನಿಜ..‌ ಆದರೆ ಈ ಕ್ಷಣವೂ ನಾವು ಇನ್ಯಾರದೋ ಆಕ್ರಮಣ ದ ಭಯದಲ್ಲಿದ್ದೇವೆ.. ನಮ್ಮವರ ಕಪಿಮುಷ್ಟಿಯೊಳಗೆ ನಾವು ಬಂಧಿತರಾಗಿದ್ದೇವೆ…. ಬಹುಷ: ಸಂಪೂರ್ಣ ಸ್ವಾತಂತ್ರ್ಯ ಅಸಾಧ್ಯವೇನೋ….?

ಏನೇ ಇರಲಿ.. ನನ್ನೆಲ್ಲಾ ಮಿತ್ರರಿಗೆ ಸ್ವಾತಂತ್ರ್ಯೋತ್ಸವದ ಶುಭಾಷಯಗಳು….

ನಮ್ಮೆಲ್ಲರ ಸ್ವಾತಂತ್ರ್ಯ ಕ್ಕೆ ಕಾರಣೀಭೂತರಾದ ಎಲ್ಲರಿಗೂ ನಮಿಸುತ್ತಾ  ಆಚರಣೆಗೆ ಲೋಪ ಬರದಂತೆ ಮೈಯೆಲ್ಲಾ ಕಣ್ಣಾಗಿಸಿ ಮಳೆ ಚಳಿಯ ಹಂಗು ತೊರೆದು ಕಾಯುತ್ತಿರುವ ಎಲ್ಲಾ ಸಹೋದರ ಸೈನಿಕ ಬಾಂಧವರಿಗೆ ತಾಯಿ ಭಾರತಿ ಇನ್ನಷ್ಟು ಶಕ್ತಿ ತುಂಬಲಿ ಆಯಸ್ಸು ಆರೋಗ್ಯ ಕರುಣಿಸಲಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

2 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

2 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

13 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

13 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

17 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago