Advertisement
ಅನುಕ್ರಮ

ಸ್ವಾತಂತ್ರ್ಯ…….. ನೆನಪಿನಂಗಳದಿಂದ……

Share

ಪ್ರತಿವರ್ಷದಂತೆ ಇಂದು ಸಂಭ್ರಮದ ದಿನ… ಈ ಆಚರಣೆಗಾಗಿ ಎಲ್ಲ ದೇಶಭಕ್ತ ರ ಮನಸ್ಸು ಹಾತೊರೆಯುತ್ತಿದೆ…ಆದರೆ ನನ್ನ ಮನಸ್ಸು ಮರುಗುತ್ತಿದೆ… ಸ್ವಾತಂತ್ರ್ಯ ಎಂಬ ಪದದ ಅರ್ಥವೇನು? ಎಂದೂ ಇಂದಿಗೂ ಅರ್ಥವಾಗಿಲ್ಲ…

ಇಂದು‌ ಹೆತ್ತವರು,ಮಡದಿ ಮಕ್ಕಳನ್ನು ಬಿಟ್ಟು ದೇಶದೊಳಕ್ಕೆ ಪಾಪಿಗಳೆಲ್ಲಿ ನುಸುಳಿ ಬರುವರೋ ಎಂಬ ಆತಂಕದಲ್ಲಿ ಮೈಯೆಲ್ಲಾ ಕಣ್ಣಾಗಿಸಿಕೊಂಡು‌‌ ಕಾಯುತ್ತಿದ್ದಾರೆ.. ಸ್ವಾತಂತ್ರ್ಯದ ಸಂಭ್ರಮ ಕ್ಕೆ ತಿರಂಗ ಧ್ವಜವನ್ನು ಬಿಗಿಬಂದೋಬಸ್ತಿನಲ್ಲಿ‌ ಹಾರಿಸುವ ಪರಿಸ್ಥಿತಿ ನಮ್ಮದು.. ಆದರೂ ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ.. ನಾವು ಸ್ವತಂತ್ರ ರು,ಗಾಂಧೀಜಿಯವರು ಯಾವಾಗ ಹೆಣ್ಣು ಮಕ್ಕಳು ರಾತ್ರಿ ವೇಳೆಯಲ್ಲಿ ಒಬ್ಬಂಟಿಗರಾಗಿ ನಡೆಯುತ್ತಾರೋ ಅಂದು ದೇಶ ಸ್ವತಂತವಾದಂತೆ,ಎಂದಿದ್ದರು .ಎಷ್ಟು ಹೆಣ್ಣುಮಕ್ಕಳು ಈ‌‌ ಪವಿತ್ರ ಭಾರತಾಂಭೆಯ ಮಣ್ಣಿನಲ್ಲಿ ರಾತ್ರಿ ಹೊತ್ತು ನಡೆದಿದ್ದಾರೋ ಗೊತ್ತಿಲ್ಲ.. ಆದರೆ ಹಗಲು ಹೊತ್ತಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳ ಮೇಲೂ ಅತ್ಯಾಚಾರದಂತಹ ಘೋರ ಅಪರಾಧಗಳು ನಡೆಯುತ್ತಿರುವುದು ಸುಳ್ಳಲ್ಲ..ಸ್ವಾತಂತ್ರ್ಯ ಕ್ಕಾಗಿ ತಮ್ಮಲ್ಲಿರುವ ಹಣ ಚಿನ್ನಾಭರಣ ಎಲ್ಲವನ್ನೂ ಕೊಟ್ಟು ಈದೇಶಕ್ಕಾಗಿ‌ ಮಡಿದವರು ಅದೆಷ್ಟೋ ಮಂದಿ..ಆದರೆ ಇಂದು ಲೆಕ್ಕ ಇಲ್ಲದಷ್ಟು ಆಸ್ತಿ ಹಣ ಸಂಪಾದಿಸಿ ಮೆರೆಯುವವರು ಅದೆಷ್ಟೋ ಮಂದಿ.. ಹೇಳಲು ಹೊರಟರೆ ಮಗಿಯದ ಕತೆ..‌ನಾವು ಬ್ರಿಟಿಷರ ದಾಸ್ಯದಿಂದ ಮುಕ್ತಿ ಹೊಂದಿದ್ದೇವೆ ನಿಜ..‌ ಆದರೆ ಈ ಕ್ಷಣವೂ ನಾವು ಇನ್ಯಾರದೋ ಆಕ್ರಮಣ ದ ಭಯದಲ್ಲಿದ್ದೇವೆ.. ನಮ್ಮವರ ಕಪಿಮುಷ್ಟಿಯೊಳಗೆ ನಾವು ಬಂಧಿತರಾಗಿದ್ದೇವೆ…. ಬಹುಷ: ಸಂಪೂರ್ಣ ಸ್ವಾತಂತ್ರ್ಯ ಅಸಾಧ್ಯವೇನೋ….?

ಏನೇ ಇರಲಿ.. ನನ್ನೆಲ್ಲಾ ಮಿತ್ರರಿಗೆ ಸ್ವಾತಂತ್ರ್ಯೋತ್ಸವದ ಶುಭಾಷಯಗಳು….

ನಮ್ಮೆಲ್ಲರ ಸ್ವಾತಂತ್ರ್ಯ ಕ್ಕೆ ಕಾರಣೀಭೂತರಾದ ಎಲ್ಲರಿಗೂ ನಮಿಸುತ್ತಾ  ಆಚರಣೆಗೆ ಲೋಪ ಬರದಂತೆ ಮೈಯೆಲ್ಲಾ ಕಣ್ಣಾಗಿಸಿ ಮಳೆ ಚಳಿಯ ಹಂಗು ತೊರೆದು ಕಾಯುತ್ತಿರುವ ಎಲ್ಲಾ ಸಹೋದರ ಸೈನಿಕ ಬಾಂಧವರಿಗೆ ತಾಯಿ ಭಾರತಿ ಇನ್ನಷ್ಟು ಶಕ್ತಿ ತುಂಬಲಿ ಆಯಸ್ಸು ಆರೋಗ್ಯ ಕರುಣಿಸಲಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

2 minutes ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

4 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

8 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

18 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

18 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

19 hours ago