Advertisement
ಅನುಕ್ರಮ

ಸ್ವಾತಂತ್ರ್ಯ…….. ನೆನಪಿನಂಗಳದಿಂದ……

Share

ಪ್ರತಿವರ್ಷದಂತೆ ಇಂದು ಸಂಭ್ರಮದ ದಿನ… ಈ ಆಚರಣೆಗಾಗಿ ಎಲ್ಲ ದೇಶಭಕ್ತ ರ ಮನಸ್ಸು ಹಾತೊರೆಯುತ್ತಿದೆ…ಆದರೆ ನನ್ನ ಮನಸ್ಸು ಮರುಗುತ್ತಿದೆ… ಸ್ವಾತಂತ್ರ್ಯ ಎಂಬ ಪದದ ಅರ್ಥವೇನು? ಎಂದೂ ಇಂದಿಗೂ ಅರ್ಥವಾಗಿಲ್ಲ…

ಇಂದು‌ ಹೆತ್ತವರು,ಮಡದಿ ಮಕ್ಕಳನ್ನು ಬಿಟ್ಟು ದೇಶದೊಳಕ್ಕೆ ಪಾಪಿಗಳೆಲ್ಲಿ ನುಸುಳಿ ಬರುವರೋ ಎಂಬ ಆತಂಕದಲ್ಲಿ ಮೈಯೆಲ್ಲಾ ಕಣ್ಣಾಗಿಸಿಕೊಂಡು‌‌ ಕಾಯುತ್ತಿದ್ದಾರೆ.. ಸ್ವಾತಂತ್ರ್ಯದ ಸಂಭ್ರಮ ಕ್ಕೆ ತಿರಂಗ ಧ್ವಜವನ್ನು ಬಿಗಿಬಂದೋಬಸ್ತಿನಲ್ಲಿ‌ ಹಾರಿಸುವ ಪರಿಸ್ಥಿತಿ ನಮ್ಮದು.. ಆದರೂ ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ.. ನಾವು ಸ್ವತಂತ್ರ ರು,ಗಾಂಧೀಜಿಯವರು ಯಾವಾಗ ಹೆಣ್ಣು ಮಕ್ಕಳು ರಾತ್ರಿ ವೇಳೆಯಲ್ಲಿ ಒಬ್ಬಂಟಿಗರಾಗಿ ನಡೆಯುತ್ತಾರೋ ಅಂದು ದೇಶ ಸ್ವತಂತವಾದಂತೆ,ಎಂದಿದ್ದರು .ಎಷ್ಟು ಹೆಣ್ಣುಮಕ್ಕಳು ಈ‌‌ ಪವಿತ್ರ ಭಾರತಾಂಭೆಯ ಮಣ್ಣಿನಲ್ಲಿ ರಾತ್ರಿ ಹೊತ್ತು ನಡೆದಿದ್ದಾರೋ ಗೊತ್ತಿಲ್ಲ.. ಆದರೆ ಹಗಲು ಹೊತ್ತಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳ ಮೇಲೂ ಅತ್ಯಾಚಾರದಂತಹ ಘೋರ ಅಪರಾಧಗಳು ನಡೆಯುತ್ತಿರುವುದು ಸುಳ್ಳಲ್ಲ..ಸ್ವಾತಂತ್ರ್ಯ ಕ್ಕಾಗಿ ತಮ್ಮಲ್ಲಿರುವ ಹಣ ಚಿನ್ನಾಭರಣ ಎಲ್ಲವನ್ನೂ ಕೊಟ್ಟು ಈದೇಶಕ್ಕಾಗಿ‌ ಮಡಿದವರು ಅದೆಷ್ಟೋ ಮಂದಿ..ಆದರೆ ಇಂದು ಲೆಕ್ಕ ಇಲ್ಲದಷ್ಟು ಆಸ್ತಿ ಹಣ ಸಂಪಾದಿಸಿ ಮೆರೆಯುವವರು ಅದೆಷ್ಟೋ ಮಂದಿ.. ಹೇಳಲು ಹೊರಟರೆ ಮಗಿಯದ ಕತೆ..‌ನಾವು ಬ್ರಿಟಿಷರ ದಾಸ್ಯದಿಂದ ಮುಕ್ತಿ ಹೊಂದಿದ್ದೇವೆ ನಿಜ..‌ ಆದರೆ ಈ ಕ್ಷಣವೂ ನಾವು ಇನ್ಯಾರದೋ ಆಕ್ರಮಣ ದ ಭಯದಲ್ಲಿದ್ದೇವೆ.. ನಮ್ಮವರ ಕಪಿಮುಷ್ಟಿಯೊಳಗೆ ನಾವು ಬಂಧಿತರಾಗಿದ್ದೇವೆ…. ಬಹುಷ: ಸಂಪೂರ್ಣ ಸ್ವಾತಂತ್ರ್ಯ ಅಸಾಧ್ಯವೇನೋ….?

ಏನೇ ಇರಲಿ.. ನನ್ನೆಲ್ಲಾ ಮಿತ್ರರಿಗೆ ಸ್ವಾತಂತ್ರ್ಯೋತ್ಸವದ ಶುಭಾಷಯಗಳು….

ನಮ್ಮೆಲ್ಲರ ಸ್ವಾತಂತ್ರ್ಯ ಕ್ಕೆ ಕಾರಣೀಭೂತರಾದ ಎಲ್ಲರಿಗೂ ನಮಿಸುತ್ತಾ  ಆಚರಣೆಗೆ ಲೋಪ ಬರದಂತೆ ಮೈಯೆಲ್ಲಾ ಕಣ್ಣಾಗಿಸಿ ಮಳೆ ಚಳಿಯ ಹಂಗು ತೊರೆದು ಕಾಯುತ್ತಿರುವ ಎಲ್ಲಾ ಸಹೋದರ ಸೈನಿಕ ಬಾಂಧವರಿಗೆ ತಾಯಿ ಭಾರತಿ ಇನ್ನಷ್ಟು ಶಕ್ತಿ ತುಂಬಲಿ ಆಯಸ್ಸು ಆರೋಗ್ಯ ಕರುಣಿಸಲಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

15 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

19 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

1 day ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

1 day ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

1 day ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

2 days ago